ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾ.ಪಂ, ಜಿ.ಪಂ ಮೀಸಲಾತಿ ಕುರಿತು ಚರ್ಚಿಸಲು 31ಕ್ಕೆ ಸರ್ವಪಕ್ಷ ಸಭೆ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮೀಸಲಾತಿ ಗೊಂದಲ
Last Updated 28 ಮಾರ್ಚ್ 2022, 21:20 IST
ಅಕ್ಷರ ಗಾತ್ರ

ಬೆಂಗಳೂರು: ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಇದೇ 31ರಂದು ಸರ್ವಪಕ್ಷನಾಯಕರ ಸಭೆ ಕರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ವಿಧಾನಸಭೆಯಲ್ಲಿ ಸೋಮವಾರ ಇಲಾಖಾ ಬೇಡಿಕೆ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ‘ಮೂರು ಹಂತದ ಪರಿಶೀಲನೆ ಬಳಿಕವೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ಈ ವಿಚಾರದಲ್ಲಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಲು ಸರ್ಕಾರ ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಮೀಸಲಾತಿ ಗೊಂದಲದ ಬಗ್ಗೆ ಕಾನೂನು ಸಚಿವರು, ಅಡ್ವೊಕೇಟ್‌ ಜನರಲ್‌ ಹಾಗೂ ಕಾನೂನು ತಜ್ಞರ ಜತೆಗೆ ನಾಲ್ಕು ಸಲ ಸಭೆ ನಡೆಸಲಾಗಿದೆ’ ಎಂದೂ ಅವರು ಹೇಳಿದರು.

‘ನರೇಗಾ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 53 ಕೋಟಿ ಮಾನವ ದಿನದ ಕೆಲಸ ಮಾಡಲಾಗಿದೆ. ಈ ವರ್ಷ 13 ಕೋಟಿ ಮಾನವ ದಿನದ ಗುರಿ ಮೀರಿ ಮತ್ತೆ 3 ಕೋಟಿ ಮಾನವ ದಿನದ ಕೆಲಸ ಮಾಡಲಾಗಿದೆ. ನರೇಗಾ ಕಾರ್ಮಿಕರಿಗೆ ಯಾವುದೇ ಕೂಲಿ ಬಾಕಿ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT