<p><strong>ಬೆಂಗಳೂರು:</strong>ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವುದರಿಂದ ಒಂದರಿಂದ ಒಂಬತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮೌಲ್ಯಾಂಕನ ವಿಶ್ಲೇಷಿಸಿ, ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.</p>.<p>ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಬತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.</p>.<p>1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು, ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್ಲೈನ್ ಮೂಲಕ ತರಗತಿ ನಿರ್ವಹಿಸಿದ್ದರೆ, ಆ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಚಟುವಟಿಕೆಗ ಆಧರಿಸಿದ ಕೃತಿ ಸಂಪುಟ, ಚೈಲ್ಡ್ ಪ್ರೊಫೈಲ್, ಇತರೆ ಲಭ್ಯ ದಾಖಲೆಗಳನ್ನು ಅವಲೋಕಿಸಿ ಈವರೆಗೆ ಪೂರೈಸಿದ ಪಠ್ಯವಸ್ತು, ಸಾಮರ್ಥ್ಯ, ಕಲಿಕಾ-ಫಲಗಳ ಸಾಧನೆ ಮತ್ತು ಕೊರತೆಗಳನ್ನು ಶಾಲಾ ಹಂತದಲ್ಲಿ ಸಿಸಿಇ ನಿಯಮಗಳಂತೆ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏ. 30ರೊಳಗೆ ನಿರ್ವಹಿಸಿ, ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p><strong>ಒಂದರಿಂದ ಐದನೇ ತರಗತಿಗಳು: </strong>ಒಂದರಿಂದ ಐದನೇ ತರಗತಿವರೆಗೆ ಶಾಲಾ ಹಂತದಲ್ಲಿ ಮಕ್ಕಳ ಪ್ರಗತಿ ವಿಶ್ಲೇಷಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆನ್ಲೈನ್ ಇಲ್ಲವೇ ಆಫ್ಲೈನ್ ಮೂಲಕವೂ ಸಹ ಮೌಲ್ಯಾಂಕನ ಮಾಡಬಾರದು. ಮೌಲ್ಯಾಂಕನಕ್ಕಾಗಿ ಈ ಮಕ್ಕಳನ್ನು ಶಾಲೆಗಳಿಗೆ ಹಾಜರಾಗುವಂತೆ ಸೂಚಿಸಬಾರದು.</p>.<p><strong>ಆರರಿಂದ ಒಂಬತ್ತನೇ ತರಗತಿಗಳು: </strong>ಈ ವಿದ್ಯಾರ್ಥಿಗಳು ನೇರವಾಗಿ ತರಗತಿಗಳಿಗೆ ಹಾಜರಾಗುತಿದ್ದರು. ಹಾಗೆಯೇ ದೂರದರ್ಶನ ಚಂದನ ವಾಹಿನಿಯ ಸಂವೇದ, ಇ-ಕಲಿಕಾ, ಆನ್ಲೈನ್ ಸೇರಿದಂತೆ ವಿವಿಧ ಪ್ರಕಾರದಲ್ಲಿ ಪಾಠ ಪ್ರವಚನ ಆಲಿಸಿರುವ ಹಿನ್ನಲೆಯಲ್ಲಿ ಈ ಮೇಲಿನ ಪಾಠ ಪ್ರವಚನ, ಕಲಿಕಾ ಪೂರಕ ಚಟುವಟಿಕೆ, ಪ್ರಾಜೆಕ್ಟ್ ಚಟುವಟಿಕೆಗಳ ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ರೂಪಣಾತ್ಮಕ ಮೌಲ್ಯಮಾಪನ ಹಾಗೂ ಸಂಕಲನಾತ್ಮಕ ಮೌಲ್ಯಮಾಪನವನ್ನು ನಿರ್ವಹಿಸಿದ ದಾಖಲೆ ಆಧರಿಸಿ ಪಡೆದ ಅಂಕಗಳನ್ನು 100ಕ್ಕೆ ವೃದ್ಧಿಸಿ ಶ್ರೇಣಿ ನಮೂದಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುತ್ತದೆ.</p>.<p>6ರಿಂದ 9ನೇ ತರಗತಿಗಳಿಗೆ 2020ರ ಆಗಸ್ಟ್ 4ರಿಂದ ಅಕ್ಟೋಬರ್ 10ರವರೆಗೆ ವಿದ್ಯಾಗಮ ತರಗತಿಗಳು ನಡೆದಿವೆ. 2021 ಜ. 29ರಿಂದ ಫೆಬ್ರವರಿ 1ರವರೆಗೆ 9 ಮತ್ತು 10ನೇ ತರಗತಿಗಳು ಪೂರ್ಣವಾಗಿ ನಡೆದಿವೆ. ಫೆ. 22ರಿಂದ ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗದ ಪ್ರದೇಶಗಳ ಶಾಲೆಗಳಲ್ಲಿ ವಿದ್ಯಾಗಮ ತರಗತಿಗಳು ನಡೆದಿವೆ. ಉಳಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ಈ ಅವಧಿಯಲ್ಲಿ ಪೂರ್ಣಾವಧಿ ಭೌತಿಕ ತರಗತಿಗಳು ನಡೆದಿವೆ. ಆನ್ಲೈನ್ ಸೇರಿದಂತೆ ವಿವಿಧ ಪ್ರಕಾರದ ತರಗತಿಗಳು ನಡೆದಿವೆ. ಹೀಗಾಗಿ ಈ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಹಾಗೂ ಫಲಿತಾಂಶ ಪ್ರಕಟಣೆ ಮಾಡಲಾಗತ್ತದೆ. ಈ ಮಕ್ಕಳಿಗೂ ಪ್ರತ್ಯೇಕ ಆನ್ಲೈನ್, ಆಫ್ಲೈನ್ ಮೂಲಕ ಮೌಲ್ಯಾಂಕನ ಮಾಡಬಾರದು.</p>.<p>ಈ ಮೌಲ್ಯಾಂಕನದ ಉದ್ದೇಶ ವಿದ್ಯಾರ್ಥಿಗಳನ್ನು ಉತ್ತೀರ್ಣ, ಅನುತ್ತೀರ್ಣ ಎಂದು ತೀರ್ಮಾನಿಸುವುದಲ್ಲ. ಬದಲಾಗಿ ಅವರ ಕಲಿಕೆಯ ಪ್ರಗತಿ ಹಾಗೂ ಕೊರತೆಯನ್ನು ತಿಳಿದು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮವನ್ನು ನಡೆಸಿ ಈ ಕೊರತೆ ತುಂಬಲು ಕ್ರಮ ವಹಿಸಲು ಶಾಲಾ ಯೋಜನೆಯನ್ನು ತಯಾರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.</p>.<p>2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಪುನರಾರಂಭವಾದ ನಂತರ ಈ ಮಕ್ಕಳಿಗೆ ಕಳೆದ ಸಾಲಿನಲ್ಲಿ ಹಿಂದಿನ ತರಗತಿಯಲ್ಲಿನ ಕಲಿಕಾ ಸಾಮರ್ಥ್ಯಗಳ ಬಗ್ಗೆ ನೈದಾನಿಕ ಪರೀಕ್ಷೆ ನಡೆಸಿ ಅವರಲ್ಲಿ ಇರುವ ಕಲಿಕಾ ಕೊರತೆ ಗುರುತಿಸಲಾಗುವುದು. ಈ ಕೊರತೆಗಳು ಹಾಗೂ ಹಿಂದಿನ ವರ್ಷ ಪಟ್ಟಿ ಮಾಡಿ ಇಟ್ಟುಕೊಂಡಿದ್ದ ಕಲಿಕಾ ಕೊರತೆಗಳನ್ನು ಆಧರಿಸಿ ಪ್ರತಿ ಮಗುವಿನವಾರು ನಿರ್ದಿಷ್ಟ ತಂತ್ರಗಳನ್ನು ರೂಪಿಸಿ ಸೇತು-ಬಂಧ ಮುಖೇನ ಪರಿಹಾರ ಬೋಧನೆ ನಡೆಸುವುದು. ನಂತರ ಸಾಫಲ್ಯ ಪರೀಕ್ಷೆ ನಡೆಸಿ ಮಕ್ಕಳಲ್ಲಿ ಕಲಿಕೆ ಆಗಿರುವುದನ್ನು ದೃಢೀಕರಿಸಿ ಮುಂದಿನ ತರಗತಿಯ ಪಠ್ಯಾಧಾರಿತ ಕಲಿಕಾಂಶಗಳ ಬೋಧನೆ ಆರಂಭಿಸಲಾಗುತ್ತದೆ.</p>.<p><strong>ಮೌಲ್ಯಾಂಕನ ಕುರಿತು ಸಭೆ: </strong>ಕಳೆದ ಸಾಲಿನಲ್ಲಿ ಮಕ್ಕಳನ್ನು ಪರೀಕ್ಷೆ ನಡೆಸದೇ ಬಡ್ತಿ ನೀಡಿದ ರೀತಿಯಲ್ಲಿ ಈ ಬಾರಿಯೂ ಹಾಗೆ ಮಾಡಿದಲ್ಲಿ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದಾದ ಸಾಧ್ಯತೆಗಳಿರುವುದರಿಂದ ಸಂಕಲನಾತ್ಮಕ ಮೌಲ್ಯಂಕನಕ್ಕೆ ಅವಕಾಶ ನೀಡಬೇಕೆಂಬ ಖಾಸಗಿ ಶಾಲಾಡಳಿತ ಮಂಡಳಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಲಾಗಿತ್ತು. ಮಕ್ಕಳ ತರಗತಿ/ವಾರ್ಷಿಕ ಮೌಲ್ಯಾಂಕನ/ಪರೀಕ್ಷೆ ಕುರಿತಂತೆ ಚರ್ಚಿಸಲು ಶಿಕ್ಷಕರ ಸಂಘಟನೆ, ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು, ಪೋಷಕರ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಗಳನ್ನು ನಡೆಸಿ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಮುಕ್ತವಾಗಿ ಚರ್ಚೆ ಅವಕಾಶ ಕಲ್ಪಿಸಲಾಗಿದೆ. ಮೌಲ್ಯಾಂಕನ ಮಾಡಿ ಆ ಮೂಲಕ ಅವರು ಸಾಧಿಸಿದ ಕಲಿಕಾ ಫಲಗಳನ್ನು ಹಾಗೂ ಸಾಧಿಸದೇ ಇರುವ ಕಲಿಕಾಂಶಗಳನ್ನು ಪತ್ತೆ ಹಚ್ಚಬೇಕು. ಆ ನಂತರ ಸಾಧಿಸದೇ ಇರುವ ಕಲಿಕಾಂಶಗಳ ಕೊರತೆಯನ್ನು ನೀಗಿಸಲು ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮದಂತಹ ವಿಶೇಷ ಪ್ರಯತ್ನಗಳನ್ನು ಹಮ್ಮಿಕೊಳ್ಳಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.</p>.<p>* 1 ರಿಂದ 7ನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೇ 1ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ಎಂದು ಘೋಷಿಸಲಾಗಿದೆ.</p>.<p>* ಜೂನ್ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ.</p>.<p>* 8 ಮತ್ತು 9ನೇ ತರಗತಿ ಮಕ್ಕಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇದೆ. ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.</p>.<p>* ಪ್ರೌಢ ಶಾಲೆಗಳಲ್ಲಿನ ಶಿಕ್ಷಕರಿಗೆ ಜೂನ್ 15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇರುತ್ತದೆ.</p>.<p>* ಜೂನ್ 21 ರಿಂದ ಜುಲೈ 5ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತವೆ.<br />ಆದರೆ, ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವುದರಿಂದ ಒಂದರಿಂದ ಒಂಬತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮೌಲ್ಯಾಂಕನ ವಿಶ್ಲೇಷಿಸಿ, ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.</p>.<p>ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಬತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.</p>.<p>1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು, ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್ಲೈನ್ ಮೂಲಕ ತರಗತಿ ನಿರ್ವಹಿಸಿದ್ದರೆ, ಆ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಚಟುವಟಿಕೆಗ ಆಧರಿಸಿದ ಕೃತಿ ಸಂಪುಟ, ಚೈಲ್ಡ್ ಪ್ರೊಫೈಲ್, ಇತರೆ ಲಭ್ಯ ದಾಖಲೆಗಳನ್ನು ಅವಲೋಕಿಸಿ ಈವರೆಗೆ ಪೂರೈಸಿದ ಪಠ್ಯವಸ್ತು, ಸಾಮರ್ಥ್ಯ, ಕಲಿಕಾ-ಫಲಗಳ ಸಾಧನೆ ಮತ್ತು ಕೊರತೆಗಳನ್ನು ಶಾಲಾ ಹಂತದಲ್ಲಿ ಸಿಸಿಇ ನಿಯಮಗಳಂತೆ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏ. 30ರೊಳಗೆ ನಿರ್ವಹಿಸಿ, ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p><strong>ಒಂದರಿಂದ ಐದನೇ ತರಗತಿಗಳು: </strong>ಒಂದರಿಂದ ಐದನೇ ತರಗತಿವರೆಗೆ ಶಾಲಾ ಹಂತದಲ್ಲಿ ಮಕ್ಕಳ ಪ್ರಗತಿ ವಿಶ್ಲೇಷಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆನ್ಲೈನ್ ಇಲ್ಲವೇ ಆಫ್ಲೈನ್ ಮೂಲಕವೂ ಸಹ ಮೌಲ್ಯಾಂಕನ ಮಾಡಬಾರದು. ಮೌಲ್ಯಾಂಕನಕ್ಕಾಗಿ ಈ ಮಕ್ಕಳನ್ನು ಶಾಲೆಗಳಿಗೆ ಹಾಜರಾಗುವಂತೆ ಸೂಚಿಸಬಾರದು.</p>.<p><strong>ಆರರಿಂದ ಒಂಬತ್ತನೇ ತರಗತಿಗಳು: </strong>ಈ ವಿದ್ಯಾರ್ಥಿಗಳು ನೇರವಾಗಿ ತರಗತಿಗಳಿಗೆ ಹಾಜರಾಗುತಿದ್ದರು. ಹಾಗೆಯೇ ದೂರದರ್ಶನ ಚಂದನ ವಾಹಿನಿಯ ಸಂವೇದ, ಇ-ಕಲಿಕಾ, ಆನ್ಲೈನ್ ಸೇರಿದಂತೆ ವಿವಿಧ ಪ್ರಕಾರದಲ್ಲಿ ಪಾಠ ಪ್ರವಚನ ಆಲಿಸಿರುವ ಹಿನ್ನಲೆಯಲ್ಲಿ ಈ ಮೇಲಿನ ಪಾಠ ಪ್ರವಚನ, ಕಲಿಕಾ ಪೂರಕ ಚಟುವಟಿಕೆ, ಪ್ರಾಜೆಕ್ಟ್ ಚಟುವಟಿಕೆಗಳ ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ರೂಪಣಾತ್ಮಕ ಮೌಲ್ಯಮಾಪನ ಹಾಗೂ ಸಂಕಲನಾತ್ಮಕ ಮೌಲ್ಯಮಾಪನವನ್ನು ನಿರ್ವಹಿಸಿದ ದಾಖಲೆ ಆಧರಿಸಿ ಪಡೆದ ಅಂಕಗಳನ್ನು 100ಕ್ಕೆ ವೃದ್ಧಿಸಿ ಶ್ರೇಣಿ ನಮೂದಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುತ್ತದೆ.</p>.<p>6ರಿಂದ 9ನೇ ತರಗತಿಗಳಿಗೆ 2020ರ ಆಗಸ್ಟ್ 4ರಿಂದ ಅಕ್ಟೋಬರ್ 10ರವರೆಗೆ ವಿದ್ಯಾಗಮ ತರಗತಿಗಳು ನಡೆದಿವೆ. 2021 ಜ. 29ರಿಂದ ಫೆಬ್ರವರಿ 1ರವರೆಗೆ 9 ಮತ್ತು 10ನೇ ತರಗತಿಗಳು ಪೂರ್ಣವಾಗಿ ನಡೆದಿವೆ. ಫೆ. 22ರಿಂದ ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗದ ಪ್ರದೇಶಗಳ ಶಾಲೆಗಳಲ್ಲಿ ವಿದ್ಯಾಗಮ ತರಗತಿಗಳು ನಡೆದಿವೆ. ಉಳಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ಈ ಅವಧಿಯಲ್ಲಿ ಪೂರ್ಣಾವಧಿ ಭೌತಿಕ ತರಗತಿಗಳು ನಡೆದಿವೆ. ಆನ್ಲೈನ್ ಸೇರಿದಂತೆ ವಿವಿಧ ಪ್ರಕಾರದ ತರಗತಿಗಳು ನಡೆದಿವೆ. ಹೀಗಾಗಿ ಈ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಹಾಗೂ ಫಲಿತಾಂಶ ಪ್ರಕಟಣೆ ಮಾಡಲಾಗತ್ತದೆ. ಈ ಮಕ್ಕಳಿಗೂ ಪ್ರತ್ಯೇಕ ಆನ್ಲೈನ್, ಆಫ್ಲೈನ್ ಮೂಲಕ ಮೌಲ್ಯಾಂಕನ ಮಾಡಬಾರದು.</p>.<p>ಈ ಮೌಲ್ಯಾಂಕನದ ಉದ್ದೇಶ ವಿದ್ಯಾರ್ಥಿಗಳನ್ನು ಉತ್ತೀರ್ಣ, ಅನುತ್ತೀರ್ಣ ಎಂದು ತೀರ್ಮಾನಿಸುವುದಲ್ಲ. ಬದಲಾಗಿ ಅವರ ಕಲಿಕೆಯ ಪ್ರಗತಿ ಹಾಗೂ ಕೊರತೆಯನ್ನು ತಿಳಿದು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮವನ್ನು ನಡೆಸಿ ಈ ಕೊರತೆ ತುಂಬಲು ಕ್ರಮ ವಹಿಸಲು ಶಾಲಾ ಯೋಜನೆಯನ್ನು ತಯಾರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.</p>.<p>2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಪುನರಾರಂಭವಾದ ನಂತರ ಈ ಮಕ್ಕಳಿಗೆ ಕಳೆದ ಸಾಲಿನಲ್ಲಿ ಹಿಂದಿನ ತರಗತಿಯಲ್ಲಿನ ಕಲಿಕಾ ಸಾಮರ್ಥ್ಯಗಳ ಬಗ್ಗೆ ನೈದಾನಿಕ ಪರೀಕ್ಷೆ ನಡೆಸಿ ಅವರಲ್ಲಿ ಇರುವ ಕಲಿಕಾ ಕೊರತೆ ಗುರುತಿಸಲಾಗುವುದು. ಈ ಕೊರತೆಗಳು ಹಾಗೂ ಹಿಂದಿನ ವರ್ಷ ಪಟ್ಟಿ ಮಾಡಿ ಇಟ್ಟುಕೊಂಡಿದ್ದ ಕಲಿಕಾ ಕೊರತೆಗಳನ್ನು ಆಧರಿಸಿ ಪ್ರತಿ ಮಗುವಿನವಾರು ನಿರ್ದಿಷ್ಟ ತಂತ್ರಗಳನ್ನು ರೂಪಿಸಿ ಸೇತು-ಬಂಧ ಮುಖೇನ ಪರಿಹಾರ ಬೋಧನೆ ನಡೆಸುವುದು. ನಂತರ ಸಾಫಲ್ಯ ಪರೀಕ್ಷೆ ನಡೆಸಿ ಮಕ್ಕಳಲ್ಲಿ ಕಲಿಕೆ ಆಗಿರುವುದನ್ನು ದೃಢೀಕರಿಸಿ ಮುಂದಿನ ತರಗತಿಯ ಪಠ್ಯಾಧಾರಿತ ಕಲಿಕಾಂಶಗಳ ಬೋಧನೆ ಆರಂಭಿಸಲಾಗುತ್ತದೆ.</p>.<p><strong>ಮೌಲ್ಯಾಂಕನ ಕುರಿತು ಸಭೆ: </strong>ಕಳೆದ ಸಾಲಿನಲ್ಲಿ ಮಕ್ಕಳನ್ನು ಪರೀಕ್ಷೆ ನಡೆಸದೇ ಬಡ್ತಿ ನೀಡಿದ ರೀತಿಯಲ್ಲಿ ಈ ಬಾರಿಯೂ ಹಾಗೆ ಮಾಡಿದಲ್ಲಿ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದಾದ ಸಾಧ್ಯತೆಗಳಿರುವುದರಿಂದ ಸಂಕಲನಾತ್ಮಕ ಮೌಲ್ಯಂಕನಕ್ಕೆ ಅವಕಾಶ ನೀಡಬೇಕೆಂಬ ಖಾಸಗಿ ಶಾಲಾಡಳಿತ ಮಂಡಳಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಲಾಗಿತ್ತು. ಮಕ್ಕಳ ತರಗತಿ/ವಾರ್ಷಿಕ ಮೌಲ್ಯಾಂಕನ/ಪರೀಕ್ಷೆ ಕುರಿತಂತೆ ಚರ್ಚಿಸಲು ಶಿಕ್ಷಕರ ಸಂಘಟನೆ, ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು, ಪೋಷಕರ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಗಳನ್ನು ನಡೆಸಿ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಮುಕ್ತವಾಗಿ ಚರ್ಚೆ ಅವಕಾಶ ಕಲ್ಪಿಸಲಾಗಿದೆ. ಮೌಲ್ಯಾಂಕನ ಮಾಡಿ ಆ ಮೂಲಕ ಅವರು ಸಾಧಿಸಿದ ಕಲಿಕಾ ಫಲಗಳನ್ನು ಹಾಗೂ ಸಾಧಿಸದೇ ಇರುವ ಕಲಿಕಾಂಶಗಳನ್ನು ಪತ್ತೆ ಹಚ್ಚಬೇಕು. ಆ ನಂತರ ಸಾಧಿಸದೇ ಇರುವ ಕಲಿಕಾಂಶಗಳ ಕೊರತೆಯನ್ನು ನೀಗಿಸಲು ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮದಂತಹ ವಿಶೇಷ ಪ್ರಯತ್ನಗಳನ್ನು ಹಮ್ಮಿಕೊಳ್ಳಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.</p>.<p>* 1 ರಿಂದ 7ನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೇ 1ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ಎಂದು ಘೋಷಿಸಲಾಗಿದೆ.</p>.<p>* ಜೂನ್ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ.</p>.<p>* 8 ಮತ್ತು 9ನೇ ತರಗತಿ ಮಕ್ಕಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇದೆ. ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.</p>.<p>* ಪ್ರೌಢ ಶಾಲೆಗಳಲ್ಲಿನ ಶಿಕ್ಷಕರಿಗೆ ಜೂನ್ 15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇರುತ್ತದೆ.</p>.<p>* ಜೂನ್ 21 ರಿಂದ ಜುಲೈ 5ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತವೆ.<br />ಆದರೆ, ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>