ಈ ವಿಚಾರವಾಗಿ ಹೇಳಿಕೆ ನೀಡಿರುವ ಅವರು, 'ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿಯು ಮೂರನೇ ಅಲೆ ಸೇರಿದಂತೆ ಎಲ್ಲಾ ಅಂಶಗಳನ್ನು ಒಳಗೊಂಡ ವರದಿ ಸಲ್ಲಿಸಿದೆ. ಮೊದಲು ಪದವಿ ಕಾಲೇಜುಗಳನ್ನು ತೆರೆಯಲು ವರದಿಯು ಶಿಫಾರಸು ಮಾಡಿದೆ. ಜುಲೈನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು, ನಂತರ ತರಗತಿಗಳು ಪ್ರಾರಂಭವಾಗಲಿವೆ' ಎಂದು ಮಾಹಿತಿ ನೀಡಿದ್ದಾರೆ.