ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲವನ್ನೂ ಪರಿಶೀಲಿಸಿಯೇಪ್ರಸನ್ನಾನಂದ ಪುರಿ ಸ್ವಾಮೀಜಿ ಅವರನ್ನು ವಾಲ್ಮೀಕಿ ಪೀಠಾಧ್ಯಕ್ಷರನ್ನಾಗಿ ಮಾಡಲಾಗಿದೆ. ಅವರ ಬಗ್ಗೆ ಕೇಳಿಬರುತ್ತಿರುವ ಆರೋಪ ಸತ್ಯಕ್ಕೆ ದೂರ. ವಾಲ್ಮೀಕಿ ಜಾತ್ರೆ ಯಶಸ್ವಿಯಾಗಿ ನಡೆಯುತ್ತದೆ. ಎಲ್ಲಿಯೂ ಗೊಂದಲವಿಲ್ಲ. ನಮ್ಮವರೇ ಕೆಲವರು ಮಾಡುತ್ತಿರುವ ಆರೋಪಗಳಿಗೆ ಯಾರೂ ಕಿವಿಗೊಡಬಾರದು’ ಎಂದು ಮನವಿ ಮಾಡಿದರು.