‘ಇದೇ 7ರಂದು ನಡೆದ ಇಲಾಖಾ ಮುಂಬಡ್ತಿ ಸಭೆಯಲ್ಲಿಯೂ ಪರಿಶಿಷ್ಟ ಜಾತಿ, ಪಂಗಡದ ನೌಕರರ ಮನವಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆ ಮೂಲಕ, ಗೃಹ ಮಂಡಳಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ಮತ್ತು ಬಡ್ತಿ ಮೀಸಲಾತಿ ಆದೇಶಗಳನ್ನು ಉಲ್ಲಂಘಿಸಿ ಪರಿಶಿಷ್ಟ ಸಮುದಾಯದ ನೌಕರರಿಗೆ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ. ಆದ್ದರಿಂದ, ಈ ಹಿಂದಿನ ಇಲಾಖಾ ಪದೋನ್ನತಿ ಸಮಿತಿಯ ನಡವಳಿಯನ್ನು ರದ್ದುಪಡಿಸಿ, ಜ್ಯೇಷ್ಢತೆ ಪಟ್ಟಿಯ ಅನ್ವಯ ಪರಿಶಿಷ್ಟ ಸಮುದಾಯದ ನೌಕರರಿಗೆ ಮುಂಬಡ್ತಿ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.