‘ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿಗಲಿಲ್ಲ. ಪ್ರಶ್ನೆ ಕೇಳಿದ ಬಹುತೇಕರೊಂದಿಗೆ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜ ಗೌರವಪೂರ್ವಕವಾಗಿ ನಡೆದುಕೊಂಡಿಲ್ಲ. ಸಂಘದ ಸದಸ್ಯ ಹರಿ ಎಂಬುವರು ಕಾನೂನಾತ್ಮಕ ಪ್ರಶ್ನೆ ಕೇಳಿದರು. ನಿಮ್ಮನ್ನು ಹೊರಕ್ಕೆ ಹಾಕಬೇಕಾಗುತ್ತದೆ ಎಂದು ಸಂಘದ ಅಧ್ಯಕ್ಷರು ಬೆದರಿಸಿರುವುದು ಖಂಡನೀಯ. ಮಹಿಳೆಯರ ಪ್ರಶ್ನೆಗಳಿಗೆ ಸಹ ಉತ್ತರ ನೀಡದೆ ಸಭೆಯನ್ನು ಮೊಟಕುಗೊಳಿಸಿದರು. ಅಧ್ಯಕ್ಷರು ಕಾವಲು ಸಮಿತಿಯ ವರದಿಯನ್ನು ನೀಡದೆ ಸಹ ತಪ್ಪನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.