ರಾಜ್ಯ ಸರ್ಕಾರ ಆಮೆ ವೇಗದಲ್ಲಿ ನಡೆಯುತ್ತಿದ್ದು, ಮೈತ್ರಿ ಸರ್ಕಾರವನ್ನು ಬೀಳಿಸಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಟೇಕಾಫ್ ಆಗದೇ ಮುಗ್ಗರಿಸಿ ಬಿದ್ದಿದೆ. ಮುಖ್ಯಮಂತ್ರಿಗಳು ಭಿನ್ನಮತ ಶಮನದಲ್ಲೇ ಕಾಲ ದೂಡುತ್ತಿದ್ದಾರೆ. ಇದುವರೆಗೂ ಜನರಿಗೆ ಯಾವುದೇ ಹೊಸ ಯೋಜನೆಗಳನ್ನು ಕೊಡಲು ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದರು.