<p><strong>ಬೆಂಗಳೂರು: </strong>ಮುಂಬರುವ ದಸರಾ ಹಬ್ಬದ ವೇಳೆ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಗೆ ಪರ್ಯಾಯವಾಗಿ ಹೊಸ ರಾಜಕೀಯ ವೇದಿಕೆ ಸ್ಥಾಪನೆ ಮಾಡುವ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಸೂಚನೆ ನೀಡಿದ್ದಾರೆ.</p>.<p>ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಪದ್ಮನಾಭ ನಗರದ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಸುಮಾರು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಎಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಹಾಜರಿದ್ದರು. ರಾಷ್ಟ್ರಪತಿ ಚುನಾವಣೆ, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕೆ.ಚಂದ್ರಶೇಖರ ರಾವ್, ‘ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗುವುದು ನಿಶ್ಚಿತ. ಇದನ್ನು ತಡೆಯಲು ಯಾವುದೇ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಇನ್ನು ಎರಡು– ಮೂರು ತಿಂಗಳಲ್ಲಿ ಈ ಸಂಬಂಧ ಮಹತ್ವದ ಸುದ್ದಿ ನಿಮಗೆ ಸಿಗುತ್ತದೆ’ ಎಂದು ಹೇಳಿದರು.</p>.<p>‘ನಾವು ಕಾಂಗ್ರೆಸ್ ಅಥವಾ ಬಿಜೆಪಿ ಜತೆ ಸೇರಿ ಸರ್ಕಾರ ಮಾಡುತ್ತೇವೆಯೋ ಇಲ್ಲವೋ ಎಂಬ ಪ್ರಶ್ನೆ ಬೇರೆ. ನಾವು(ಪರ್ಯಾಯ ಶಕ್ತಿ) ಒಗ್ಗೂಡಿ ದೇಶದ ಭವಿಷ್ಯವನ್ನು ಇನ್ನಷ್ಟು ಉಜ್ವಲಗೊಳಿಸುವುದು ನಿಶ್ಚಿತ’ ಎಂದು ಅವರು ಹೇಳಿದರು.</p>.<p>‘2018 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಬೆಂಗಳೂರಿಗೆ ಬಂದಿದ್ದೆ. ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತೇನೆ ಎಂದು ಹೇಳಿದ್ದೆ. ನಾನು ಹೇಳಿದ್ದು ನಿಜವಾಯಿತು, ಅವರು ಮುಖ್ಯಮಂತ್ರಿ ಆದರು. ಈಗಲೂ ಹೇಳುತ್ತೇನೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಬದಲಾವಣೆ ಆಗಲಿದೆ’ ಎಂದರು.</p>.<p>ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ಈ ಪಕ್ಷಗಳ ಮುಖಂಡರ ಜತೆ ಕೆಸಿಆರ್ ಚರ್ಚೆ ಮಾಡುತ್ತಿದ್ದಾರೆ. ಹಿಂದಿನ ಪ್ರಯತ್ನಕ್ಕಿಂತ ಹೊಸ ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ದೇಶದ ಸಂಪತ್ತು ಕಡು ಬಡವರಿಗೆ ತಲುಪಬೇಕಿದೆ. ಈ ಬಗ್ಗೆ ಅವರು ಚರ್ಚಿಸಿದ್ದಾರೆ ಎಂದರು.</p>.<p><strong>ತೃತೀಯ ರಂಗಕ್ಕೆ ಗೌಡರ ಮಾರ್ಗದರ್ಶನ?</strong><br />ಬಿಜೆಪಿ– ಕಾಂಗ್ರೆಸ್ಗೆ ಪರ್ಯಾಯವಾಗಿ (ತೃತೀಯ ರಂಗ) ಹುಟ್ಟು ಹಾಕುವ ರಾಜಕೀಯ ವೇದಿಕೆಯಲ್ಲಿ ಎಎಪಿ, ಸಮಾಜವಾದಿ ಪಕ್ಷ ಮುಂತಾದ ಪ್ರಮುಖ ಪಕ್ಷಗಳು ಇರಲಿವೆ. ಎಚ್.ಡಿ.ದೇವೇಗೌಡ ಅವರು ಇದಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.</p>.<p>‘ಪರ್ಯಾಯ ವೇದಿಕೆಯ ಬಗ್ಗೆ ಇವತ್ತು ಪ್ರಾಥಮಿಕ ಹಂತದ ಮಾತುಕತೆ ನಡೆದಿದ್ದು, ಇನ್ನಷ್ಟೇ ಸ್ಪಷ್ಟ ರೂಪ ಪಡೆದುಕೊಳ್ಳಬೇಕಾಗಿದೆ. ಇನ್ನೊಮ್ಮೆ ದೇವೇಗೌಡರನ್ನು ಭೇಟಿ ಮಾಡುತ್ತೇನೆ’ ಎಂದು ಕೆಸಿಆರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಂಬರುವ ದಸರಾ ಹಬ್ಬದ ವೇಳೆ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಗೆ ಪರ್ಯಾಯವಾಗಿ ಹೊಸ ರಾಜಕೀಯ ವೇದಿಕೆ ಸ್ಥಾಪನೆ ಮಾಡುವ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಸೂಚನೆ ನೀಡಿದ್ದಾರೆ.</p>.<p>ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಪದ್ಮನಾಭ ನಗರದ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಸುಮಾರು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಎಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಹಾಜರಿದ್ದರು. ರಾಷ್ಟ್ರಪತಿ ಚುನಾವಣೆ, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕೆ.ಚಂದ್ರಶೇಖರ ರಾವ್, ‘ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗುವುದು ನಿಶ್ಚಿತ. ಇದನ್ನು ತಡೆಯಲು ಯಾವುದೇ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಇನ್ನು ಎರಡು– ಮೂರು ತಿಂಗಳಲ್ಲಿ ಈ ಸಂಬಂಧ ಮಹತ್ವದ ಸುದ್ದಿ ನಿಮಗೆ ಸಿಗುತ್ತದೆ’ ಎಂದು ಹೇಳಿದರು.</p>.<p>‘ನಾವು ಕಾಂಗ್ರೆಸ್ ಅಥವಾ ಬಿಜೆಪಿ ಜತೆ ಸೇರಿ ಸರ್ಕಾರ ಮಾಡುತ್ತೇವೆಯೋ ಇಲ್ಲವೋ ಎಂಬ ಪ್ರಶ್ನೆ ಬೇರೆ. ನಾವು(ಪರ್ಯಾಯ ಶಕ್ತಿ) ಒಗ್ಗೂಡಿ ದೇಶದ ಭವಿಷ್ಯವನ್ನು ಇನ್ನಷ್ಟು ಉಜ್ವಲಗೊಳಿಸುವುದು ನಿಶ್ಚಿತ’ ಎಂದು ಅವರು ಹೇಳಿದರು.</p>.<p>‘2018 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಬೆಂಗಳೂರಿಗೆ ಬಂದಿದ್ದೆ. ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತೇನೆ ಎಂದು ಹೇಳಿದ್ದೆ. ನಾನು ಹೇಳಿದ್ದು ನಿಜವಾಯಿತು, ಅವರು ಮುಖ್ಯಮಂತ್ರಿ ಆದರು. ಈಗಲೂ ಹೇಳುತ್ತೇನೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಬದಲಾವಣೆ ಆಗಲಿದೆ’ ಎಂದರು.</p>.<p>ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ಈ ಪಕ್ಷಗಳ ಮುಖಂಡರ ಜತೆ ಕೆಸಿಆರ್ ಚರ್ಚೆ ಮಾಡುತ್ತಿದ್ದಾರೆ. ಹಿಂದಿನ ಪ್ರಯತ್ನಕ್ಕಿಂತ ಹೊಸ ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ದೇಶದ ಸಂಪತ್ತು ಕಡು ಬಡವರಿಗೆ ತಲುಪಬೇಕಿದೆ. ಈ ಬಗ್ಗೆ ಅವರು ಚರ್ಚಿಸಿದ್ದಾರೆ ಎಂದರು.</p>.<p><strong>ತೃತೀಯ ರಂಗಕ್ಕೆ ಗೌಡರ ಮಾರ್ಗದರ್ಶನ?</strong><br />ಬಿಜೆಪಿ– ಕಾಂಗ್ರೆಸ್ಗೆ ಪರ್ಯಾಯವಾಗಿ (ತೃತೀಯ ರಂಗ) ಹುಟ್ಟು ಹಾಕುವ ರಾಜಕೀಯ ವೇದಿಕೆಯಲ್ಲಿ ಎಎಪಿ, ಸಮಾಜವಾದಿ ಪಕ್ಷ ಮುಂತಾದ ಪ್ರಮುಖ ಪಕ್ಷಗಳು ಇರಲಿವೆ. ಎಚ್.ಡಿ.ದೇವೇಗೌಡ ಅವರು ಇದಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.</p>.<p>‘ಪರ್ಯಾಯ ವೇದಿಕೆಯ ಬಗ್ಗೆ ಇವತ್ತು ಪ್ರಾಥಮಿಕ ಹಂತದ ಮಾತುಕತೆ ನಡೆದಿದ್ದು, ಇನ್ನಷ್ಟೇ ಸ್ಪಷ್ಟ ರೂಪ ಪಡೆದುಕೊಳ್ಳಬೇಕಾಗಿದೆ. ಇನ್ನೊಮ್ಮೆ ದೇವೇಗೌಡರನ್ನು ಭೇಟಿ ಮಾಡುತ್ತೇನೆ’ ಎಂದು ಕೆಸಿಆರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>