ಇವರ ಅವಧಿಯಲ್ಲಿ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷ್ ಮತ್ತು ರೀಡೂ ಅಲ್ಲದೆ, ಹಾಸಿಗೆ ಹಗರಣ, ದಿಂಬಿನ ಹಗರಣ, ಹಾಸ್ಟೆಲ್ ಹಗರಣ, ಪಿಡಬ್ಲ್ಯುಡಿ ಹಗರಣ, ಬೋರ್ವೆಲ್ ಹಗರಣ, ಮೆಡಿಕಲ್ ಹಗರಣ ಹೀಗೆ ಹಗರಣಗಳ ಸರಮಾಲೆಯೇ ನಡೆದಿತ್ತು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಆಗಿ ಏಳು ತಿಂಗಳ ಬಳಿಕ ಮತ್ತು ನ್ಯಾಯಾಲಯ ಸೂಚಿಸಿದ್ದರಿಂದ ಸಚಿವ ಜಾರ್ಜ್ ರಾಜೀನಾಮೆ ಕೊಟ್ಟರು. ಹಗರಣಗಳ ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಮುಂದಾಗಲಿಲ್ಲ ಎಂದು ನಳಿನ್ ದೂರಿದರು.