ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಅಂಬೇಡ್ಕರ್‌ ಜ್ಯೋತಿ ಯಾತ್ರೆ: ಛಲವಾದಿ ನಾರಾಯಣಸ್ವಾಮಿ

Last Updated 4 ಸೆಪ್ಟೆಂಬರ್ 2022, 22:43 IST
ಅಕ್ಷರ ಗಾತ್ರ

ಕೋಲಾರ: ಬಿಜೆಪಿ ರಾಜ್ಯ ಎಸ್‌.ಸಿ ಮೋರ್ಚಾ ಆಶ್ರಯದಲ್ಲಿ ನ.26ರಿಂದ ಡಿ.6ವರೆಗೆ ಅಂಬೇಡ್ಕರ್ ಜ್ಯೋತಿ ಯಾತ್ರೆ ನಡೆಸಲಾಗುವುದು. ರಾಜ್ಯದ ಐದು ವಿಭಾಗಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲಾಗುವುದು ಎಂದು ಮೋರ್ಚಾದ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಐದು ತಂಡಗಳು ಹತ್ತು ದಿನ ರಾಜ್ಯದಾದ್ಯಂತ ಯಾತ್ರೆ ಸಂಚರಿಸಲಿವೆ. ಅಂಬೇಡ್ಕರ್‌ ಪರಿನಿರ್ವಾಣ ದಿನದಂದು ಸಮಾರೋಪ ನಡೆಯಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಮ್ಮ ಕಾರ್ಯಕ್ರಮ ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್‌ನವರು ಕೆ.ಎಚ್‌.ಮುನಿಯಪ್ಪ ಹಾಗೂ ಡಾ.ಜಿ.ಪರಮೇಶ್ವರ ಸಾರಥ್ಯದಲ್ಲಿ ದಲಿತೋತ್ಸವ ನಡೆಸಲು ಮುಂದಾಗಿದ್ದಾರೆ. ಉತ್ಸವ ಆರಂಭವಾಗುವಷ್ಟರಲ್ಲಿ ಈ ಇಬ್ಬರು ನಾಯಕರು ಕಾಂಗ್ರೆಸ್‌ನಲ್ಲಿ ಉಳಿಯುವುದೇ ಅನುಮಾನ’ ಎಂದರು.

ನಗರದಲ್ಲಿ ಮೂರು ದಿನ ಆಯೋಜಿಸಿದ್ದ ಬಿಜೆಪಿ ಎಸ್‌.ಸಿ ಮೋರ್ಚಾ ಪ್ರಶಿಕ್ಷಣ ವರ್ಗಕ್ಕೆ ಭಾನುವಾರ ತೆರೆ ಬಿತ್ತು.ಮೈಸೂರಿನಲ್ಲಿ ಅಕ್ಟೋಬರ್‌ನಲ್ಲಿ ಎರಡು ದಿನ ಬಿಜೆಪಿ ಎಸ್‌.ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಆಯೋಜಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT