ಅಂಬೇಡ್ಕರ್ ಅವರ ಜೀವನ ಚರಿತ್ರೆ, ಹೋರಾಟಗಳು, ಸಂವಿಧಾನ ರಚನೆಯ ಪ್ರಕ್ರಿಯೆ, ಆ ಸಂದರ್ಭದಲ್ಲಿ ಸಹಕಾರ ನೀಡಿದ ಮಹನೀಯರ ವಿವರ ಮತ್ತು ಸಾಧನೆಗಳ ಕುರಿತು ಸ್ಮಾರಕ ಭವನದಲ್ಲಿ ಸಮಗ್ರ ಮಾಹಿತಿ ಒದಗಿಸಲಾಗುವುದು. ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲೂ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ವಸ್ತು ಸಂಗ್ರಹಾಲಯವೊಂದನ್ನು ಆರಂಭಿಸಲಾಗುವುದು ಎಂದು ವಿವರಿಸಿದರು.