<p><strong>ಬೆಂಗಳೂರು: </strong>ಡಾ.ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಕುರ್ಚಿಗಾಗಿ ನಡೆದ ‘ಗುದ್ದಾಟ’ ಅಂತ್ಯಗೊಂಡಿದ್ದು, ಕೆ.ಎನ್. ಸುರೇಶ್ ನಾಯ್ಕ್ ಅವರು ಸೋಮವಾರದಿಂದ ಕರ್ತವ್ಯ ನಿರತರಾಗಿದ್ದಾರೆ.</p>.<p>ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಲಿ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ, ಆ ಜಾಗಕ್ಕೆಸುರೇಶ್ ನಾಯ್ಕ್ ಅವರನ್ನು ನಿಯೋಜಿಸಿತ್ತು. ಆದರೆ, ಸುರೇಶ್ ಕುಮಾರ್ ‘ಕುರ್ಚಿ’ ಬಿಟ್ಟು ಕೊಡದ ಕಾರಣ ಗೊಂದಲ ಉಂಟಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಸೋಮವಾರದ ಸಂಚಿಕೆಯಲ್ಲಿ ವರದಿ ಮಾಡಿತ್ತು.</p>.<p>‘ವರದಿ ಪ್ರಕಟಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರು, ಸುರೇಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಕುರ್ಚಿ ಬಿಟ್ಟುಕೊಟ್ಟು, ಕರ್ತವ್ಯ ನಿಭಾಯಿಸಲು ಸುರೇಶ್ ನಾಯ್ಕ್ ಅವರಿಗೆ ಅವಕಾಶ ಮಾಡಿಕೊಡುವಂತೆ ತಾಕೀತು ಮಾಡಿದ್ದರು’ ಎಂದು ನಿಗಮದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡಾ.ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಕುರ್ಚಿಗಾಗಿ ನಡೆದ ‘ಗುದ್ದಾಟ’ ಅಂತ್ಯಗೊಂಡಿದ್ದು, ಕೆ.ಎನ್. ಸುರೇಶ್ ನಾಯ್ಕ್ ಅವರು ಸೋಮವಾರದಿಂದ ಕರ್ತವ್ಯ ನಿರತರಾಗಿದ್ದಾರೆ.</p>.<p>ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಲಿ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ, ಆ ಜಾಗಕ್ಕೆಸುರೇಶ್ ನಾಯ್ಕ್ ಅವರನ್ನು ನಿಯೋಜಿಸಿತ್ತು. ಆದರೆ, ಸುರೇಶ್ ಕುಮಾರ್ ‘ಕುರ್ಚಿ’ ಬಿಟ್ಟು ಕೊಡದ ಕಾರಣ ಗೊಂದಲ ಉಂಟಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಸೋಮವಾರದ ಸಂಚಿಕೆಯಲ್ಲಿ ವರದಿ ಮಾಡಿತ್ತು.</p>.<p>‘ವರದಿ ಪ್ರಕಟಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರು, ಸುರೇಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಕುರ್ಚಿ ಬಿಟ್ಟುಕೊಟ್ಟು, ಕರ್ತವ್ಯ ನಿಭಾಯಿಸಲು ಸುರೇಶ್ ನಾಯ್ಕ್ ಅವರಿಗೆ ಅವಕಾಶ ಮಾಡಿಕೊಡುವಂತೆ ತಾಕೀತು ಮಾಡಿದ್ದರು’ ಎಂದು ನಿಗಮದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>