ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ, ಪಾಲಿಸ್ಟರ್ ಧ್ವಜಕ್ಕೂ ಅನುಮತಿ ನೀಡಿದ್ದು ಖಾದಿ ಪ್ರಿಯರಲ್ಲಿ ಅಸಮಾಧಾನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಖಾದಿ ಗ್ರಾಮೋದ್ಯೋಗ ಸಂಸ್ಥೆಯ ರಾಷ್ಟ್ರಧ್ವಜ ತಯಾರಿಕಾ ಕೇಂದ್ರಕ್ಕೆ ರಾಹುಲ್ ಭೇಟಿ ನೀಡಿ, ಸಿಬ್ಬಂದಿ ಜೊತೆ ಕೆಲಕಾಲ ಚರ್ಚಿಸಿದರು.