<p><strong>ಬೆಂಗಳೂರು</strong>: ‘ಉಪನ್ಯಾಸಕರ ವರ್ಗಾವಣೆ ಕಾಯ್ದೆ –2016 ಅನ್ನು ವಾಪಸ್ ಪಡೆದು, ತಿದ್ದುಪಡಿ ಮಸೂದೆಯನ್ನು ಸದ್ಯವೇ ನಡೆಯ<br />ಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳ ಸದಸ್ಯರ ಜತೆ ಬುಧವಾರ ನಡೆಸಿದ ಸಮಾಲೋಚನೆ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>‘ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡಿ, ಕಳೆದ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಉದ್ದೇಶಿಸಲಾಗಿತ್ತು. ಆದರೆ, ಕಾಯ್ದೆಯಲ್ಲಿ ಹಲವು ದೋಷಗಳಿದ್ದ ಕಾರಣ ವಾಪಸ್ ಪಡೆಯಲು ನಿರ್ಧರಿಸಲಾಗಿದೆ’ ಎಂದರು.</p>.<p>‘ವಿಶ್ವವಿದ್ಯಾಲಯಗಳ ಕುಲಸಚಿವರ ಹುದ್ದೆಗಳಿಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಿಸಲು ಸುಗ್ರೀವಾಜ್ಞೆ ತರಲಾಗಿದ್ದು, ಅದಕ್ಕೂ ಒಪ್ಪಿಗೆ ಪಡೆಯಲಾಗುವುದು’ ಎಂದು ಅಶ್ವತ್ಥನಾರಾಯಣ ಹೇಳಿದರು. ಆಗ, ‘ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳನ್ನು ನೇಮಿಸಬೇಡಿ’ ಎಂದು ವೈ.ಎ. ನಾರಾಯಣ ಸ್ವಾಮಿ ಸಲಹೆ ನೀಡಿದರು.</p>.<p>‘ಸೇವಾ ಹಿರಿತನಕ್ಕಿಂತ ಕಾರ್ಯನಿರ್ವಹಣೆಯ ದಕ್ಷತೆ ಪರಿಗಣಿಸಿ ಬಡ್ತಿ ನೀಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಉಪನ್ಯಾಸಕರ ವರ್ಗಾವಣೆ ಕಾಯ್ದೆ –2016 ಅನ್ನು ವಾಪಸ್ ಪಡೆದು, ತಿದ್ದುಪಡಿ ಮಸೂದೆಯನ್ನು ಸದ್ಯವೇ ನಡೆಯ<br />ಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳ ಸದಸ್ಯರ ಜತೆ ಬುಧವಾರ ನಡೆಸಿದ ಸಮಾಲೋಚನೆ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>‘ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡಿ, ಕಳೆದ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಉದ್ದೇಶಿಸಲಾಗಿತ್ತು. ಆದರೆ, ಕಾಯ್ದೆಯಲ್ಲಿ ಹಲವು ದೋಷಗಳಿದ್ದ ಕಾರಣ ವಾಪಸ್ ಪಡೆಯಲು ನಿರ್ಧರಿಸಲಾಗಿದೆ’ ಎಂದರು.</p>.<p>‘ವಿಶ್ವವಿದ್ಯಾಲಯಗಳ ಕುಲಸಚಿವರ ಹುದ್ದೆಗಳಿಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಿಸಲು ಸುಗ್ರೀವಾಜ್ಞೆ ತರಲಾಗಿದ್ದು, ಅದಕ್ಕೂ ಒಪ್ಪಿಗೆ ಪಡೆಯಲಾಗುವುದು’ ಎಂದು ಅಶ್ವತ್ಥನಾರಾಯಣ ಹೇಳಿದರು. ಆಗ, ‘ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳನ್ನು ನೇಮಿಸಬೇಡಿ’ ಎಂದು ವೈ.ಎ. ನಾರಾಯಣ ಸ್ವಾಮಿ ಸಲಹೆ ನೀಡಿದರು.</p>.<p>‘ಸೇವಾ ಹಿರಿತನಕ್ಕಿಂತ ಕಾರ್ಯನಿರ್ವಹಣೆಯ ದಕ್ಷತೆ ಪರಿಗಣಿಸಿ ಬಡ್ತಿ ನೀಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>