ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಗುಜರಾತ್ನ ಅಮುಲ್ನಷ್ಟೇ ಪ್ರಬಲವಾಗಿ ಕೆಎಂಎಫ್ ಬೆಳೆಯುತ್ತಿದೆ. ಎರಡೂ ಒಟ್ಟಾಗಿ ಹೋದರೆ ಅಭಿವೃದ್ಧಿ ಸಾಧ್ಯ ಎಂದು ಮಂಡ್ಯದ ಗೆಜ್ಜಲಗೆರೆಯಲ್ಲಿ ಮಾತನಾಡುವಾಗ ಕೇಂದ್ರ ಸಚಿವರು ಹೇಳಿದ್ದರು. ಚುನಾವಣೆ ಸಮೀಪದಲ್ಲಿರುವ ಕಾರಣದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ನವರು ಗಿಮಿಕ್ ಮಾಡಿ, ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದರು.