ಬಿ.ಎಸ್. ಯಡಿಯೂರಪ್ಪನವರು ಬಿಜೆಪಿ ಪಕ್ಷ ಮತ್ತು ಕರ್ನಾಟಕದ ಜನರಿಗೆ ಅತ್ಯಂತ ಭಕ್ತಿಯಿಂದ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ತಳಮಟ್ಟದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ಕೊಡುಗೆ ಮತ್ತು ಕಠಿಣ ಪರಿಶ್ರಮ ನಿಜಕ್ಕೂ ಸ್ಫೂರ್ತಿದಾಯಕವಾದದ್ದು. ಪಕ್ಷ ಮತ್ತು ಸರ್ಕಾರಕ್ಕೆ ಅವರ ಮಾರ್ಗದರ್ಶನದ ಅಗತ್ಯವಿದೆ. ಅವರು ಅದನ್ನು ಮುಂದುವರಿಸುತ್ತಾರೆ ಎಂದು ನಂಬಿರುವುದಾಗಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.