ಮುಳಬಾಗಿಲು: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಲ್ಪಸಂಖ್ಯಾತರ ಬೃಹತ್ ಸಮಾವೇಶದ ಮೆರವಣಿಗೆ ವೇಳೆ ಪಕ್ಷದ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ಮೇಲೆ ಕಾರ್ಯಕರ್ತರೊಬ್ಬರು ನೋಟುಗಳನ್ನು ಚೆಲ್ಲಿದರು.
ಸಂಗಮ ಟಾಕೀಸ್ ಮುಂಭಾಗ ತೆರೆದ ವಾಹನದಲ್ಲಿ ಸಾಗುತ್ತಿದ್ದಾಗ ₹ 10, 20, 50 ಮುಖಬೆಲೆಯ ಎರಡು ಕಂತೆಗಳನ್ನು ಎಸೆದರು.
ತಾಲ್ಲೂಕಿನ ವಿವಿಧೆಡೆಯಿದ ಟೆಂಪೊ ಹಾಗೂ ಬಸ್ಗಳಲ್ಲಿ ಬಂದಿದ್ದ ಸುಮಾರು ನಾಲ್ಕು ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.