ಇದೇ 13 ರಿಂದ ಅಧಿವೇಶನ ಆರಂಭವಾಗಿದ್ದು, ಒಂದೂ ದಿನ ಅವರು ಕಲಾಪಕ್ಕೆ ಹಾಜರಾಗಿಲ್ಲ. ಇದರಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮೇಲೆ ಕಲಾಪದ ಕಾರ್ಯಭಾರದ ಒತ್ತಡ ಅಧಿಕವಾಗಿದೆ. ಸಭಾಧ್ಯಕ್ಷ ಕಾರ್ಯನಿರ್ವಹಣೆಯ ಪ್ಯಾನಲ್ನ ಇತರ ಸದಸ್ಯರನ್ನು ಬಳಸಿ ಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಆನಂದ
ಮಾಮನಿ, ಸದನಕ್ಕೆ ಗೈರಾಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.