ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಆನಂದ್‌ ಸಿಂಗ್‌ ಬಿಜೆಪಿ ತೊರೆಯಲ್ಲ: ಶ್ರೀರಾಮುಲು

Last Updated 31 ಜನವರಿ 2022, 10:38 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): 'ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್ ಅವರು ಸೋಮವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿರುವುದು ರಾಜಕೀಯ ವಿಚಾರಕ್ಕಲ್ಲ. ಅವರು ಬಿಜೆಪಿ ತೊರೆಯಲ್ಲ' ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ತಾಲ್ಲೂಕಿನ ಹಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಆನಂದ್‌ ಸಿಂಗ್‌ ಅವರು ಶಿವಕುಮಾರ ಅವರನ್ನು ಭೇಟಿಯಾಗಿದ್ದಾರೆ. ಅದರಲ್ಲಿ ಯಾವುದೇ ರಾಜಕೀಯ ವಿಚಾರವಿಲ್ಲ' ಎಂದು ಹೇಳಿದರು.

'ಬಿಜೆಪಿಯಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಆನಂದ್‌ ಸಿಂಗ್‌ ಅವರೇ ಮುಖ್ಯ ಕಾರಣ. ಎಲ್ಲರೂ ಸೇರಿಕೊಂಡು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲ್ಲು ಶ್ರಮಿಸುತ್ತೇವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT