ಮೈಸೂರಿನಲ್ಲಾಗಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ‘ಅತ್ಯಾಚಾರದಂತಹ ಅಮಾನವೀಯ ಕೃತ್ಯಗಳಲ್ಲಿ ಯಾರೂ ಭಾಗಿಯಾಗಲೇಬಾರದು. ದುಬೈನಲ್ಲಿ ಕಳ್ಳತನ ಮಾಡಿದರೆ ಅಂತಹವರ ದೇಹದ ಕೆಲ ಅಂಗಗಳನ್ನೇ ಕತ್ತರಿಸಿಬಿಡುತ್ತಾರೆ ಎಂಬುದನ್ನು ಕೇಳಿದ್ದೇನೆ. ಅತ್ಯಾಚಾರಿಗಳಿಗೂ ಅದೇ ಮಾದರಿಯ ಶಿಕ್ಷೆಯಾಗಬೇಕು. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದಕ್ಕೆ ಅವಕಾಶವಿಲ್ಲ’ ಎಂದು ಹೇಳಿದರು.