ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಗೀತೆ: ಅನಂತಸ್ವಾಮಿ ಧಾಟಿ ಅಧಿಕೃತ?

Last Updated 1 ಅಕ್ಟೋಬರ್ 2021, 18:43 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ಅನಂತಸ್ವಾಮಿ ಅವರು ರಾಗ ಸಂಯೋಜಿಸಿರುವ ಧಾಟಿ ಯನ್ನೇ ನಾಡಗೀತೆಗೆ ಅಳವಡಿಸಿಕೊಳ್ಳಲು ತಜ್ಞರ ಸಮಿತಿ ಶಿಫಾರಸ್ಸು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದನ್ನೇ ಅಧಿಕೃತ ಎಂದು ಶನಿವಾರ ಪ್ರಕಟಿಸುವ ಸಾಧ್ಯತೆ ಇದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕೆ ಸಂಬಂಧಿಸಿದ ಕಡತವನ್ನು ಬೊಮ್ಮಾಯಿ ಅವರಿಗೆ ಕಳುಹಿಸಿದೆ. ಈ ಕಡತಕ್ಕೆ ಸಹಿ ಆದ ತಕ್ಷಣವೇ ಮುಖ್ಯಮಂತ್ರಿಯವರೇ ಅಧಿಕೃತವಾಗಿ ಪ್ರಕಟಿಸ ಲಿದ್ದಾರೆ. ನಾಡಗೀತೆಯ ಅವಧಿ 2 ನಿಮಿಷ 14 ಸೆಕೆಂಡುಗಳಷ್ಟು ಇರಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸರ್ಕಾರ ರಚಿಸಿದ್ದ ಸಮಿತಿಯಲ್ಲಿ ಕವಿ ದೊಡ್ಡರಂಗೇಗೌಡ, ಎಚ್‌.ಆರ್‌.ಲೀಲಾವತಿ, ಕಸ್ತೂರಿ ಶಂಕರ್‌ ಸೇರಿ ಒಟ್ಟು 18 ಮಂದಿ ಇದ್ದರು. ಸಮಿತಿಯು ಒಮ್ಮತದಿಂದಲೇ ಅನಂತಸ್ವಾಮಿ ಧಾಟಿಯ ನಾಡಗೀತೆ ಅಳವಡಿಸಿಕೊ
ಳ್ಳಲು ಒಪ್ಪಿಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT