ಕಂದಾಯ ಸಚಿವ ಆರ್. ಅಶೋಕ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಯರಾಂ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು, ಸಾಮಾಜಿಕ ಪಿಂಚಣಿ ವಿತರಣೆಯಲ್ಲಿ ಸುಧಾರಣೆ, ಭೂ ಪರಿವರ್ತನೆ ಪ್ರಕ್ರಿಯೆಯ ಅವಧಿ ಇಳಿಕೆ, ಪ್ಲಾಂಟೇಷನ್ ಬೆಳೆಗಾರರಿಗೆ ಸರ್ಕಾರಿ ಜಮೀನುಗಳನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಕಾಯ್ದೆ ಜಾರಿ ಮಾಡಿರುವುದು, ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುತ್ತಿರುವುದರ ಕುರಿತು ಮಾಹಿತಿ ನೀಡಿದರು.