ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಸದಸ್ಯ, ಶಿಕ್ಷಣ ತಜ್ಞ ಪ್ರೊ.ತೇಜಸ್ವಿ ಕಟ್ಟೀಮನಿ ಅವರು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ (ಸಿಟಿಯುಎಪಿ) ಮೊದಲ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಈ ನೇಮಕ ಮಾಡಿದ್ದಾರೆ.
ತೇಜಸ್ವಿಯವರು ಅಮರಕಂಟಕ್ನಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾಗಿ, ಹೈದರಾಬಾದ್ ಮೌಲಾನಾ ಆಜಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು.