‘ಅಂಗನವಾಡಿ ನೌಕರರು ಗ್ರಾಚ್ಯುಟಿಗೆ ಅರ್ಹರು’ ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್ ಏಪ್ರಿಲ್ನಲ್ಲಿ ನೀಡಿದೆ. ನಿವೃತ್ತಿ ಹೊಂದಿರುವ ಸಾವಿರಾರು ಅಂಗನವಾಡಿ ನೌಕರರು ಅರ್ಜಿ ಸಲ್ಲಿಸಿದ್ದು, ಅದನ್ನು ಕೆಲವೆಡೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಈ ಅರ್ಜಿದಾರರಿಗೆ ಕೂಡಲೇ ಗ್ರಾಚ್ಯುಟಿ ಪಾವತಿಸಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಬೇಕು. ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಒತ್ತಾಯಿಸಿದರು.