ಚಿಂತಾಮಣಿ:ತಾಲ್ಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಅಂಗನವಾಡಿ ಕಾರ್ಯಕರ್ತೆಯನ್ನು ಕತ್ತು ಸೀಳಿ ಕೊಲೆ ಮಾಡಿ, ಚಿನ್ನಾಭರಣ ಕಳ್ಳತನ ಮಾಡಲಾಗಿದೆ.
ಚೊಕ್ಕನಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಎಸ್.ವೆಂಕಟಲಕ್ಷ್ಮಮ್ಮ (51) ಕೊಲೆಯಾದವರು. ಅವರು ನಾಯನಹಳ್ಳಿ ಗ್ರಾಮದಲ್ಲಿ ಒಬ್ಬರೇ ಜೀವನ ನಡೆಸುತ್ತಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಮಂಗಳವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಮನೆಯಿಂದ ಹೊರ ಬಂದು ವಿದ್ಯುತ್ ಬಿಲ್ ಸ್ವೀಕರಿಸಿದ್ದರು. ಆ ನಂತರ ಅವರು ಮನೆಯಿಂದ ಹೊರಬಂದಿರಲಿಲ್ಲ ಎಂದು ಸುತ್ತಮುತ್ತಲಿನ ಮನೆಯವರು ತಿಳಿಸಿದ್ದಾರೆ. ಹಾಗಾಗಿ ಮಧ್ಯಾಹ್ನ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.