ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ಅಂಗನವಾಡಿ ಕಾರ್ಯಕರ್ತೆಯ ಕತ್ತು ಸೀಳಿ ಕೊಲೆ, ಚಿನ್ನಾಭರಣ ಕಳ್ಳತನ

Last Updated 14 ಜುಲೈ 2022, 5:48 IST
ಅಕ್ಷರ ಗಾತ್ರ

ಚಿಂತಾಮಣಿ:ತಾಲ್ಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಅಂಗನವಾಡಿ ಕಾರ್ಯಕರ್ತೆಯನ್ನು ಕತ್ತು ಸೀಳಿ ಕೊಲೆ ಮಾಡಿ, ಚಿನ್ನಾಭರಣ ಕಳ್ಳತನ ಮಾಡಲಾಗಿದೆ.

ಚೊಕ್ಕನಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಎಸ್.ವೆಂಕಟಲಕ್ಷ್ಮಮ್ಮ (51) ಕೊಲೆಯಾದವರು. ಅವರು ನಾಯನಹಳ್ಳಿ ಗ್ರಾಮದಲ್ಲಿ ಒಬ್ಬರೇ ಜೀವನ ನಡೆಸುತ್ತಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಮಂಗಳವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಮನೆಯಿಂದ ಹೊರ ಬಂದು ವಿದ್ಯುತ್ ಬಿಲ್ ಸ್ವೀಕರಿಸಿದ್ದರು. ಆ ನಂತರ ಅವರು ಮನೆಯಿಂದ ಹೊರಬಂದಿರಲಿಲ್ಲ ಎಂದು ಸುತ್ತಮುತ್ತಲಿನ ಮನೆಯವರು ತಿಳಿಸಿದ್ದಾರೆ. ಹಾಗಾಗಿ ಮಧ್ಯಾಹ್ನ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT