ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಸಂಪನ್ಮೂಲ: ಅನಿಲ್‌ ಕುಮಾರ್‌ ಸಲಹೆಗಾರ

Last Updated 3 ಜೂನ್ 2021, 23:04 IST
ಅಕ್ಷರ ಗಾತ್ರ

ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಮೇ 31ರಂದು ನಿವೃತ್ತರಾಗಿರುವ ಅನಿಲ್‌ ಕುಮಾರ್‌ ಅವರನ್ನು ಅಂತರ ರಾಜ್ಯ ಜಲ ವಿವಾದಗಳ ಪ್ರಧಾನ ಸಲಹೆಗಾರರು ಹಾಗೂ ಕೃಷ್ಣಾ, ಮಹದಾಯಿ ಜಲ ವಿವಾದ ತಾಂತ್ರಿಕ ಸಮಿತಿ ಮತ್ತು ನೀರಾವರಿ ಯೋಜನೆಗಳ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ.

ಡಿ.ಎನ್‌. ದೇಸಾಯಿ ಅವರ ನಿಧನದ ಬಳಿಕ ಈ ಮೂರೂ ಹುದ್ದೆಗಳ ಕಾರ್ಯಭಾರವನ್ನು ಅನಿಲ್‌ ಕುಮಾರ್‌ ಅವರಿಗೆ ನೀಡಲಾಗಿತ್ತು. ವಯೋ ನಿವೃತ್ತಿಯ ಬಳಿಕ ಈ ಹುದ್ದೆಗಳಿಗೆ ಅವರನ್ನು ನೇಮಕ ಮಾಡಿ ಜಲ ಸಂಪನ್ಮೂಲ ಇಲಾಖೆ ಆದೇಶ ಹೊರಡಿಸಿದೆ.

ಕೃಷ್ಣಾ ಕಣಿವೆಯ ಸಮಗ್ರ ನೀರಾವರಿ ಯೋಜನೆ ರೂಪಿಸುವುದು, ಕೃಷ್ಣಾ ಮತ್ತು ಮಹದಾಯಿ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಲಹೆ, ಶಿಫಾರಸುಗಳನ್ನು ನೀಡುವುದು, ಕೃಷ್ಣಾ– ಮಹದಾಯಿ ಜಲ ವಿವಾದಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಿತಿ ಹಾಗೂ ನೀರಾವರಿ ತಾಂತ್ರಿಕ ಸಲಹಾ ಸಮಿತಿಗಳಿಗೆ ವಹಿಸಿರುವ ಕೆಲಸಗಳನ್ನು ಅನಿಲ್‌ ಕುಮಾರ್‌ ನಿರ್ವಹಿಸಬೇಕಿದೆ. ಜಲ ಸಂಪನ್ಮೂಲ ಇಲಾಖೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಸಲಹೆ ನೀಡುವ ಕೆಲಸವನ್ನೂ ಮಾಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT