ಕೊಲೆ ಆರೋಪದಲ್ಲಿ ಹಿಂಡಲಗಾ ಜೈಲು ಸೇರಿರುವ ಜಯೇಶ್ ಪೂಜಾರಿ, ಜನವರಿ 14ರಂದು ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ. ₹ 100 ಕೋಟಿ ನೀಡದಿದ್ದರೆ ಸ್ಫೋಟಿಸಿ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಹೇಳಿದ್ದ. ಕರೆಯ ಜಾಡು ಹಿಡಿದು ನಾಗ್ಪುರ ಪೊಲೀಸರು ಹಿಂಡಲಗಾ ಜೈಲಿಗೆ ಬಂದು ಪರಿಶೀಲನೆ ನಡೆಸಿದ್ದರು.