‘ಕೆಲವು ದಿನಗಳ ಹಿಂದೆ ಪತ್ರ ಬರೆದರೂ, ಅಖಿಲ ಭಾರತಮಟ್ಟದ ಮೆರಿಟ್ ಕೋಟಾದಡಿ ಆಯ್ಕೆಯಾದ ರಾಜ್ಯದ ವಿದ್ಯಾರ್ಥಿಗಳನ್ನೇ ಸ್ಥಳೀಯ ಮೀಸಲಿನಡಿ ಪರಿಗಣಿಸಿ, ದಾರಿ ತಪ್ಪಿಸುತ್ತಿರುವುದು ಸಹಜ ನ್ಯಾಯದ ತತ್ವಕ್ಕೆ ವಿರುದ್ಧ. ವಿಶಾಖಪಟ್ಟಣ, ರಾಯಪುರ, ಕೋಲ್ಕತ್ತ ಮತ್ತಿತರ ನಗರಗಳಲ್ಲಿ ಇಂತಹ ಕಾನೂನು ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ರಾಜ್ಯದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳನ್ನು ಕೊಡಲಾಗುತ್ತಿದೆ. ಇದೇ ಮಾದರಿಯನ್ನು ಬೆಂಗಳೂರಿನ ಲಾ ಸ್ಕೂಲ್ ಅನುಸರಿಸಬೇಕು’ ಎಂದಿದ್ದಾರೆ.