ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ಕಾಯ್ದೆ ಯಾರನ್ನೂ ಗುರಿಯಾಗಿಸಿ ಅಲ್ಲ: ಆರಗ

Last Updated 11 ನವೆಂಬರ್ 2021, 20:21 IST
ಅಕ್ಷರ ಗಾತ್ರ

ಬೆಂಗಳೂರು: ‘ಯಾವುದೇ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಪ್ರಸ್ತಾವಿತ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಉದ್ದೇಶ ಇಲ್ಲ’ ಎಂದು ಕ್ರೈಸ್ತ ಸಮುದಾಯದ ಮುಖಂಡರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

‘ಸಮಗ್ರ ಸಾಮಾಜಿಕ ಹಿತಾಸಕ್ತಿ ಹಾಗೂ ಎಲ್ಲ ಧರ್ಮೀಯರೂ, ತಮ್ಮ ತಮ್ಮ ಧರ್ಮವನ್ನು ಶಾಂತಿ ಹಾಗೂ ಸಹಬಾಳ್ವೆಯಿಂದ ಆಚರಿಸಲು ಪೂರಕವಾಗುವಂತೆ ಕಾಯ್ದೆ ರೂಪಿಸಲು ಚಿಂತನೆ ನಡೆದಿದೆ’ ಎಂದೂ ಅವರು ಹೇಳಿದರು.

ಮತಾಂತರ ನಿಷೇಧ ಕಾಯ್ದೆ ತರುವ ಕುರಿತು ಕ್ರೈಸ್ತ ಸಮುದಾಯದ ಮುಖಂಡರು ಸಚಿವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿದರು. ‘ಬಲವಂತದ ಮತಾಂತರವನ್ನು ನಾವೂ ವಿರೋಧಿಸುತ್ತೇವೆ’ ಎಂದೂ ಮುಖಂಡರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT