<p><strong>ಬೆಂಗಳೂರು:</strong> ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಸಚಿವ ವೇಲಂಪಳ್ಳಿ ಶ್ರೀನಿವಾಸ ರಾವ್ ಅವರು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿದ್ದು, ತಮ್ಮ ರಾಜ್ಯದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.</p>.<p>ಆಂಧ್ರಪ್ರದೇಶದ ವಿವಿಧೆಡೆ ಹಲವು ದಿನಗಳಿಂದ ಹಿಂದೂ ದೇವಾಲಯಗಳ ಮೇಲೆ ದಾಳಿಗಳು ನಡೆದಿದ್ದು, ರಥಕ್ಕೆ ಬೆಂಕಿ ಇಟ್ಟಿದ್ದು, ವಿಗ್ರಹಗಳ ಧ್ವಂಸದ ಪ್ರಕರಣಗಳು ನಡೆದಿದ್ದವು. ಅಂತಹ ಸ್ಥಳಗಳಿಗೆ ಕಳೆದ ವಾರ ಭೇಟಿ ನೀಡಿದ್ದ ಸ್ವಾಮೀಜಿ, ದಾಳಿ ನಿಯಂತ್ರಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದರು. ಈ ಕಾರಣದಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸೂಚನೆಯ ಮೇರೆಗೆ ಧಾರ್ಮಿಕ ದತ್ತಿ ಸಚಿವರು ಸ್ವಾಮೀಜಿಯನ್ನು ಭೇಟಿಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ದೇವಾಲಯಗಳ ಮೇಲಿನ ದಾಳಿಯ ಹಿಂದಿನ ನಿಖರ ಕಾರಣ ತಿಳಿಯಬೇಕು ಮತ್ತು ಎಲ್ಲ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕು. ಈ ಪ್ರಕರಣಗಳು ಮತೀಯ ಗಲಭೆಗೆ ದಾರಿಯಾಗದಂತೆ ಎಚ್ಚರಿಕೆ ವಹಿಸಬೇಕು. ದಾಳಿಯಿಂದ ಹಾನಿಗೀಡಾದ ದೇವಾಲಯಗಳ ದುರಸ್ತಿಯನ್ನು ತಕ್ಷಣವೇ ಆರಂಭಿಸಬೇಕು. ದೇವಾಲಯಗಳ ನಿರ್ವಹಣೆಯನ್ನು ಸ್ಥಳೀಯರಿಗೆ ವಹಿಸಬೇಕು’ ಎಂದು ಸ್ವಾಮೀಜಿ ಸಚಿವರಿಗೆ ಸಲಹೆ ನೀಡಿದ್ದಾರೆ.</p>.<p>‘ಎಲ್ಲ ಪ್ರಕರಣಗಳ ಆರೋಪಿಗಳನ್ನೂ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಹಾನಿಗೀಡಾದ ದೇವಾಲಯಗಳ ದುರಸ್ತಿ ಶೀಘ್ರದಲ್ಲಿ ಆರಂಭವಾಗಲಿದೆ. ದಾಳಿ ತಡೆ ಮತ್ತು ಆರೋಪಿಗಳ ಪತ್ತೆಗೆ ತಂತ್ರಜ್ಞಾನದ ನೆರವಿನಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಈ ವಿಚಾರದಲ್ಲಿ ನೀವು ನೇರವಾಗಿ ಸರ್ಕಾರದ ಜತೆ ಸಂಪರ್ಕದಲ್ಲಿರಬೇಕು. ಹಾನಿಗೀಡಾದ ದೇವಸ್ಥಾನಗಳ ವೀಕ್ಷಣೆ ಬಳಿಕ ಸರ್ಕಾರದ ಜತೆ ಮಾಹಿತಿ ಹಂಚಿಕೊಳ್ಳಬೇಕು‘ ಎಂದು ಸಚಿವರು ಸ್ವಾಮೀಜಿಗೆ ಮನವಿ ಮಾಡಿದ್ದಾರೆ.</p>.<p>ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟಿ ಡಿ.ಪಿ. ಅನಂತ್ ಭೇಟಿಯ ವೇಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಸಚಿವ ವೇಲಂಪಳ್ಳಿ ಶ್ರೀನಿವಾಸ ರಾವ್ ಅವರು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿದ್ದು, ತಮ್ಮ ರಾಜ್ಯದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.</p>.<p>ಆಂಧ್ರಪ್ರದೇಶದ ವಿವಿಧೆಡೆ ಹಲವು ದಿನಗಳಿಂದ ಹಿಂದೂ ದೇವಾಲಯಗಳ ಮೇಲೆ ದಾಳಿಗಳು ನಡೆದಿದ್ದು, ರಥಕ್ಕೆ ಬೆಂಕಿ ಇಟ್ಟಿದ್ದು, ವಿಗ್ರಹಗಳ ಧ್ವಂಸದ ಪ್ರಕರಣಗಳು ನಡೆದಿದ್ದವು. ಅಂತಹ ಸ್ಥಳಗಳಿಗೆ ಕಳೆದ ವಾರ ಭೇಟಿ ನೀಡಿದ್ದ ಸ್ವಾಮೀಜಿ, ದಾಳಿ ನಿಯಂತ್ರಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದರು. ಈ ಕಾರಣದಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸೂಚನೆಯ ಮೇರೆಗೆ ಧಾರ್ಮಿಕ ದತ್ತಿ ಸಚಿವರು ಸ್ವಾಮೀಜಿಯನ್ನು ಭೇಟಿಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ದೇವಾಲಯಗಳ ಮೇಲಿನ ದಾಳಿಯ ಹಿಂದಿನ ನಿಖರ ಕಾರಣ ತಿಳಿಯಬೇಕು ಮತ್ತು ಎಲ್ಲ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕು. ಈ ಪ್ರಕರಣಗಳು ಮತೀಯ ಗಲಭೆಗೆ ದಾರಿಯಾಗದಂತೆ ಎಚ್ಚರಿಕೆ ವಹಿಸಬೇಕು. ದಾಳಿಯಿಂದ ಹಾನಿಗೀಡಾದ ದೇವಾಲಯಗಳ ದುರಸ್ತಿಯನ್ನು ತಕ್ಷಣವೇ ಆರಂಭಿಸಬೇಕು. ದೇವಾಲಯಗಳ ನಿರ್ವಹಣೆಯನ್ನು ಸ್ಥಳೀಯರಿಗೆ ವಹಿಸಬೇಕು’ ಎಂದು ಸ್ವಾಮೀಜಿ ಸಚಿವರಿಗೆ ಸಲಹೆ ನೀಡಿದ್ದಾರೆ.</p>.<p>‘ಎಲ್ಲ ಪ್ರಕರಣಗಳ ಆರೋಪಿಗಳನ್ನೂ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಹಾನಿಗೀಡಾದ ದೇವಾಲಯಗಳ ದುರಸ್ತಿ ಶೀಘ್ರದಲ್ಲಿ ಆರಂಭವಾಗಲಿದೆ. ದಾಳಿ ತಡೆ ಮತ್ತು ಆರೋಪಿಗಳ ಪತ್ತೆಗೆ ತಂತ್ರಜ್ಞಾನದ ನೆರವಿನಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಈ ವಿಚಾರದಲ್ಲಿ ನೀವು ನೇರವಾಗಿ ಸರ್ಕಾರದ ಜತೆ ಸಂಪರ್ಕದಲ್ಲಿರಬೇಕು. ಹಾನಿಗೀಡಾದ ದೇವಸ್ಥಾನಗಳ ವೀಕ್ಷಣೆ ಬಳಿಕ ಸರ್ಕಾರದ ಜತೆ ಮಾಹಿತಿ ಹಂಚಿಕೊಳ್ಳಬೇಕು‘ ಎಂದು ಸಚಿವರು ಸ್ವಾಮೀಜಿಗೆ ಮನವಿ ಮಾಡಿದ್ದಾರೆ.</p>.<p>ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟಿ ಡಿ.ಪಿ. ಅನಂತ್ ಭೇಟಿಯ ವೇಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>