ಹೊಸ ಕಾನೂನು ಅರ್ಥ ಮಾಡಿಕೊಳ್ಳದೇ ಇರುವವರು ರೈತರಿಗೆ ತೊಂದರೆ ಆಗುತ್ತದೆ ಎಂದು ಸುಳ್ಳು ವಿಚಾರಗಳನ್ನು ಹಬ್ಬಿಸುತ್ತಿದ್ದಾರೆ. ರೈತನಿಗೆ ತಾನು ಬೆಳೆದದ್ದನ್ನು ಮಾರಲು ಹೆಚ್ಚಿನ ಆಯ್ಕೆಗಳು ಸಿಕ್ಕಿವೆ. ಹಿಂದೆ ಎಪಿಎಂಸಿ ಬಿಟ್ಟು ಬೇರೆ ಕಡೆ ಮಾರುವುದಕ್ಕೆ ಅವಕಾಶ ಇರಲಿಲ್ಲ. ಈಗ ತನ್ನ ಇಷ್ಟ ಬಂದ ಕಡೆ, ಹೆಚ್ಚು ಬೆಲೆಗೆ ಉತ್ಪನ್ನಗಳನ್ನು ಮಾರಿಕೊಳ್ಳಬಹುದು ಎಂದು ಸೋಮಶೇಖರ್ ವಿವರಿಸಿದರು.