ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿವಮೊಗ್ಗದ ಕಲ್ಲಹಳ್ಳಿಯ ಕರ್ನಾಟಕ ಗೃಹ ಮಂಡಳಿ ಬಡಾವಣೆಯಲ್ಲಿ ಮಗಳಿಗೆ ನಿವೇಶನ ಮಂಜೂರು ಮಾಡಿರುವುದು, ಭದ್ರಾವತಿ ತಾಲ್ಲೂಕಿನ ಹುಣಸೆಕಟ್ಟೆಯಲ್ಲಿ ಅಕ್ರಮವಾಗಿ 69 ಎಕರೆ ಜಮೀನು ಖರೀದಿಸಿರುವುದು ಮತ್ತು ಕೋಟೆಗಂಗೂರಿನಲ್ಲಿ ಜಮೀನಿನ ಭೂಪರಿವರ್ತನೆ ಮಾಡಿಸಿ ತಮ್ಮ ಕುಟುಂಬದ ಒಡೆತನದ ಧವಳಗಿರಿ ಡೆವಲಪರ್ಸ್ ಕಂಪನಿ ಹೆಸರಿಗೆ ವರ್ಗಾವಣೆ ಮಾಡಿಸಿಕೊಂಡಿರುವ ಆರೋಪದ ಮೇಲೆ ವಿನೋದ್, ಶಿವಮೊಗ್ಗ ನ್ಯಾಯಾಲಯದಲ್ಲಿ ಮೂರು ಖಾಸಗಿ ದೂರು ದಾಖಲಿಸಿದ್ದರು.