<p><strong>ಬೆಂಗಳೂರು: </strong>ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದ ತನಿಖೆ ನಡೆಸಿರುವ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗ ನೀಡಿರುವ ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲು ನಿರ್ದೇಶನ ನೀಡಲು ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.</p>.<p>ಕಮಿಟಿ ಫಾರ್ ಪಬ್ಲಿಕ್ ಅಕೌಂಟಬಿಲಿಟಿ ಟ್ರಸ್ಟ್ ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮುರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.</p>.<p>‘2017ರ ಆಗಸ್ಟ್ 23ರಂದು ನ್ಯಾಯಮೂರ್ತಿ ಕೆಂಪಣ್ಣ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವಿಚಾರಣಾ ಆಯೋಗದ ಕಾಯ್ದೆ 1952ರ ಸೆಕ್ಷನ್ 3(4) ಪ್ರಕಾರ ವರದಿ ಸಲ್ಲಿಕೆಯಾದ 6 ತಿಂಗಳಲ್ಲಿ ಶಾಸನಸಭೆಯ ಮುಂದೆ ಮಂಡಿಸಬೇಕಾಗುತ್ತದೆ. ಆಯೋಗ ವರದಿ ಸಲ್ಲಿಸಿ 4 ವರ್ಷಗಳು ಕಳೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ವರದಿ ಮಂಡಿಸಲು ನಿರ್ದೇಶನ ನೀಡಲು ಸಾಧ್ಯವಾಗದಿದ್ದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠ, ವಿಚಾರಣೆಯನ್ನು ನ.15ಕ್ಕೆ ಮುಂದೂಡಿತು.</p>.<p>ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಅರ್ಕಾವತಿ ಬಡಾವಣೆಯಲ್ಲಿ 541 ಎಕರೆ ಭೂಮಿಯನ್ನು ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಡಿನೋಟಿಫೈ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳು ಬಂದ ಬಳಿಕ ವಿಚಾರಣೆಗೆ ಆಯೋಗ ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದ ತನಿಖೆ ನಡೆಸಿರುವ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗ ನೀಡಿರುವ ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲು ನಿರ್ದೇಶನ ನೀಡಲು ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.</p>.<p>ಕಮಿಟಿ ಫಾರ್ ಪಬ್ಲಿಕ್ ಅಕೌಂಟಬಿಲಿಟಿ ಟ್ರಸ್ಟ್ ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮುರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.</p>.<p>‘2017ರ ಆಗಸ್ಟ್ 23ರಂದು ನ್ಯಾಯಮೂರ್ತಿ ಕೆಂಪಣ್ಣ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವಿಚಾರಣಾ ಆಯೋಗದ ಕಾಯ್ದೆ 1952ರ ಸೆಕ್ಷನ್ 3(4) ಪ್ರಕಾರ ವರದಿ ಸಲ್ಲಿಕೆಯಾದ 6 ತಿಂಗಳಲ್ಲಿ ಶಾಸನಸಭೆಯ ಮುಂದೆ ಮಂಡಿಸಬೇಕಾಗುತ್ತದೆ. ಆಯೋಗ ವರದಿ ಸಲ್ಲಿಸಿ 4 ವರ್ಷಗಳು ಕಳೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ವರದಿ ಮಂಡಿಸಲು ನಿರ್ದೇಶನ ನೀಡಲು ಸಾಧ್ಯವಾಗದಿದ್ದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠ, ವಿಚಾರಣೆಯನ್ನು ನ.15ಕ್ಕೆ ಮುಂದೂಡಿತು.</p>.<p>ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಅರ್ಕಾವತಿ ಬಡಾವಣೆಯಲ್ಲಿ 541 ಎಕರೆ ಭೂಮಿಯನ್ನು ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಡಿನೋಟಿಫೈ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳು ಬಂದ ಬಳಿಕ ವಿಚಾರಣೆಗೆ ಆಯೋಗ ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>