ಮತ ಎಣಿಕೆ ಮುಂದೂಡಿರುವುದನ್ನು ಪ್ರಶ್ನಿಸಿ ನ್ಯೂಸ್ ಇಂಡಿಯಾ ವೋಟರ್ಸ್ ಫೋರಂ, ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯ ಚುನಾವಣಾ ಆಯೋಗಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದೆ. ‘ಮತ ಪೆಟ್ಟಿಗೆಗಳನ್ನು ಇರಿಸಿರುವ ಸ್ಥಳಗಳಲ್ಲಿ ಭದ್ರತೆ ಕೊರತೆ ಇದೆ. ಅಲ್ಲಿಗೆ ಹಲವು ಕಡೆಗಳಿಂದ ಸಂಪರ್ಕ ಸಾಧ್ಯವಿದೆ. ಭದ್ರತೆಯ ಕೊರತೆ ಕಾರಣದಿಂದ ತಕ್ಷಣವೇ ಮತ ಎಣಿಕೆ ಆರಂಭಿಸಿ, ಫಲಿತಾಂಶ ಪ್ರಕಟಿಸಲು ಆದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.