ವಿಧಾನ ಪರಿಷತ್ನಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ವಿಷಯ ಪ್ರಸ್ತಾಪಿಸಿ, ‘ಶೇ 50ರಷ್ಟು (7091) ಅತಿಥಿ ಉಪನ್ಯಾಸಕರನ್ನು ಮಾತ್ರ ಮುಂದುವರಿಸುವಂತೆ ಜ. 19ರಂದು ಆದೇಶ ಹೊರಡಿಸಲಾಗಿದೆ. ಇದರಿಂದ ಬೋಧನೆಯಲ್ಲೇ ಅವಲಂಬಿಸಿರುವ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗಿದೆ’ ಎಂದರು. ಅದಕ್ಕೆ ಬಿಜೆಪಿಯ ಆಯನೂರು ಮಂಜುನಾಥ್ ಮತ್ತು ಜೆಡಿಎಸ್ನ ಶ್ರೀಕಂಠೇಗೌಡ ಕೂಡಾಧ್ವನಿಗೂಡಿಸಿದರು.