<p><strong>ಬೆಂಗಳೂರು: </strong>ಕೋವಿಡ್ ಸೋಂಕಿತರ ಚಿಕಿತ್ಸೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.</p>.<p>‘ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಮತ್ತು ಜನರ ಕುಂದು–ಕೊರತೆ ವಿಚಾರಿಸಲು ಇದರಿಂದ ಅನುಕೂಲವಾಗುತ್ತದೆ. ಈ ರೀತಿಯ ಸಮಿತಿಯೊಂದನ್ನು ನೇಮಿಸಿದರೆ ಸರ್ಕಾರದ ಆಡಳಿತಾತ್ಮಕ ಕ್ರಮಗಳ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಲಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.</p>.<p>ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ, ನಿವೃತ್ತ ಪೊಲೀಸ್ ಮಹಾನಿರ್ದೇಶಕರನ್ನು ಒಳಗೊಂಡ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆ.</p>.<p>‘ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10 ಸಾವಿರ ದಾಟಿದೆ. ದೊಡ್ಡಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಫಲಿತಾಂಶದ ದಿನ ಕೋವಿಡ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು’ ಎಂದು ಪೀಠ ತಿಳಿಸಿತು.</p>.<p class="Subhead"><strong>ರೆಮ್ಡಿಸಿವಿರ್ ಕೊರತೆ ಇಲ್ಲ: ‘</strong>ರಾಜ್ಯದಲ್ಲಿ ರೆಮ್ಡಿಸಿವಿರ್ ಕೊರತೆ ಇಲ್ಲ. ವಿವಿಧ ಹಂತಗಳಲ್ಲಿ 35,821 ಬಾಟಲಿಗಳು ಲಭ್ಯವಿದ್ದು, ಹೆಚ್ಚುವರಿಯಾಗಿ 70 ಸಾವಿರ ಬಾಟಲಿ ತರಿಸಲಾಗುತ್ತಿದೆ. ಜನವರಿ 1ರಿಂದ ಈವರೆಗೆ 55 ಸಾವಿರ ಬಾಟಲಿಗಳನ್ನು ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ’ ಎಂದು ಹೈಕೋರ್ಟ್ಗೆ ಸರ್ಕಾರ ಮಾಹಿತಿ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಸೋಂಕಿತರ ಚಿಕಿತ್ಸೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.</p>.<p>‘ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಮತ್ತು ಜನರ ಕುಂದು–ಕೊರತೆ ವಿಚಾರಿಸಲು ಇದರಿಂದ ಅನುಕೂಲವಾಗುತ್ತದೆ. ಈ ರೀತಿಯ ಸಮಿತಿಯೊಂದನ್ನು ನೇಮಿಸಿದರೆ ಸರ್ಕಾರದ ಆಡಳಿತಾತ್ಮಕ ಕ್ರಮಗಳ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಲಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.</p>.<p>ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ, ನಿವೃತ್ತ ಪೊಲೀಸ್ ಮಹಾನಿರ್ದೇಶಕರನ್ನು ಒಳಗೊಂಡ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆ.</p>.<p>‘ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10 ಸಾವಿರ ದಾಟಿದೆ. ದೊಡ್ಡಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಫಲಿತಾಂಶದ ದಿನ ಕೋವಿಡ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು’ ಎಂದು ಪೀಠ ತಿಳಿಸಿತು.</p>.<p class="Subhead"><strong>ರೆಮ್ಡಿಸಿವಿರ್ ಕೊರತೆ ಇಲ್ಲ: ‘</strong>ರಾಜ್ಯದಲ್ಲಿ ರೆಮ್ಡಿಸಿವಿರ್ ಕೊರತೆ ಇಲ್ಲ. ವಿವಿಧ ಹಂತಗಳಲ್ಲಿ 35,821 ಬಾಟಲಿಗಳು ಲಭ್ಯವಿದ್ದು, ಹೆಚ್ಚುವರಿಯಾಗಿ 70 ಸಾವಿರ ಬಾಟಲಿ ತರಿಸಲಾಗುತ್ತಿದೆ. ಜನವರಿ 1ರಿಂದ ಈವರೆಗೆ 55 ಸಾವಿರ ಬಾಟಲಿಗಳನ್ನು ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ’ ಎಂದು ಹೈಕೋರ್ಟ್ಗೆ ಸರ್ಕಾರ ಮಾಹಿತಿ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>