ಮೈಸೂರಿನಲ್ಲಿ ಗುರುವಾರ ಮಾಧ್ಯಮದವರ ಜತೆ ಮಾತನಾಡಿ, ರೋಹಿಣಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಮೈಸೂರಿನ ಕೆಲವು ಭೂಹಗರಣಗಳನ್ನು ಬಯಲಿಗೆಳೆದಿದ್ದಾರೆ. ಎಲ್ಲೆಲ್ಲಿ ಒತ್ತುವರಿ ಆಗಿದೆ ಎಂಬ ನಿಖರ ಮಾಹಿತಿ ಅವರಲ್ಲಿದೆ. ಆದ್ದರಿಂದ ಆರು ತಿಂಗಳ ಅವಧಿಗೆ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.