ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದಲ್ಲಿ ಸಮರ್ಥ ಕಾನೂನು ತಜ್ಞರ ತಂಡ ನೇಮಕ: ಸಿಎಂ

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ನ.23ರಂದು ‘ಸುಪ್ರೀಂ’ನಲ್ಲಿ ವಿಚಾರಣೆ
Last Updated 4 ಸೆಪ್ಟೆಂಬರ್ 2022, 22:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸುಪ್ರೀಂಕೋರ್ಟ್‌ನಲ್ಲಿ ನ.23ರಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದದ ವಿಷಯ ವಿಚಾರಣೆಗೆ ಬರಲಿದೆ. ರಾಜ್ಯದ ಪರವಾಗಿ ವಾದ ಮಂಡಿಸಲು ಸಮರ್ಥ ಕಾನೂನು ತಜ್ಞರ ತಂಡ ನೇಮಕ ಮಾಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಡಿ ವಿವಾದದ ಕುರಿತು ಈಗಾಗಲೇ ಅಡ್ವೊಕೇಟ್ ಜನರಲ್ ಅವರನ್ನು ಸಂಪರ್ಕಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡಿಸಲು ನುರಿತ ಹಿರಿಯ ವಕೀಲರನ್ನು ನಿಯೋಜಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಸರ್ಕಾರ ಈ ಕುರಿತು ನಿರ್ಲಕ್ಷ್ಯ ವಹಿಸಿಲ್ಲ. ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT