‘ಶಿರಾ ವಿಧಾನಸಭಾ ಉಪ ಚುನಾವಣೆ ಸಮಯದಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ಕೊಟ್ಟ ಭರವಸೆಯಂತೆ ನಿಗಮ ಸ್ಥಾಪಿಸಲಾಗಿತ್ತು. ಪಕ್ಷ ಹಾಗೂ ಸಮುದಾಯಕ್ಕೆ ಮಾರಣ್ಣ ಸಲ್ಲಿಸಿರುವ ಸೇವೆ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಕೊಡಲಾಗಿತ್ತು’ ಎಂದು ಶಿರಾ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದ್ದಾರೆ.