'ಸ್ಯಾಂಟ್ರೋ ರವಿ ಗೃಹ ಸಚಿವರ ಮನೆಯಲ್ಲೇ ಹಣದ ಗಂಟು ಬಿಚ್ಚಿ, ಎಣಿಕೆ ಮಾಡುತ್ತಿರುವ ವಿಡಿಯೊ ಇದೆ' ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಸೋಮವಾರ ಪ್ರತಿಕ್ರಿಯಿಸಿರುವ ಅವರು, 'ನಾನು ಜೀವನದಲ್ಲಿ ನೈತಿಕತೆ ಪಾಲಿಸಿಕೊಂಡು ಬಂದಿದ್ದೇನೆ. ಯಾವತ್ತೂ, ಯಾರಿಗೂ ನನ್ನ ಮನೆಗೆ ಬಂದು ಹಣದ ಗಂಟು ಬಿಚ್ಚುವ ಅವಕಾಶ ನೀಡಿಲ್ಲ' ಎಂದಿದ್ದಾರೆ.