ಸಂಗೊಳ್ಳಿ ರಾಯಣ್ಣ, ಶಿವಾಜಿ ಮಹಾರಾಜರು ಹಾಗೂ ಬಸವಣ್ಣ ಒಂದೇ ಭಾಷೆ ಅಥವಾ ಜಾತಿಗೆ ಸೀಮಿತವಾಗಿಲ್ಲ. ಗಡಿಯಲ್ಲಿ ಕನ್ನಡಿಗರು-ಮರಾಠಿಗರು ಅನ್ಯೋನ್ಯವಾಗಿದ್ದಾರೆ. ಆದರೆ, ಕೆಲ ಕಿಡಿಗೇಡಿಗಳು ಹುಳಿ ಹಿಂಡುವ ಕೆಲಸ ಮಾಡಿದ್ದಾರೆ. ಅಂಥವರು ಮತ್ತೆ ತಲೆ ಎತ್ತದಂತೆ ಕ್ರಮ ಜರುಗಿಸುತ್ತೇವೆ. ನಗರದ ವಿವಿಧೆಡೆ ಕಲ್ಲುತೂರಾಟ ಹಾಗೂ ರಾಯಣ್ಣ ಪ್ರತಿಮೆ ಭಗ್ನ ಘಟನೆಗಳ ಸಂಬಂಧ 38 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.