ಜ್ಞಾನೇಂದ್ರ ಅಸಮರ್ಥ ಗೃಹ ಸಚಿವ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಭಾನುವಾರ ಪ್ರತಿಕ್ರಿಯಿಸಿದ ಅವರು, ʼನಮ್ಮ ಪಕ್ಷ ಮತ್ತು ಮುಖ್ಯಮಂತ್ರಿ ಮೆಚ್ಚುವಂತೆ ಕೆಲಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿಲ್ಲದ ಕಾರಣದಿಂದ ರಾಜ್ಯದಲ್ಲಿ ಜಂಗಲ್ ರಾಜ್ ನಿರ್ಮಾಣವಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅವರ ಪ್ರಮಾಣಪತ್ರದಿಂದ ನನ್ನ ಸಾಮರ್ಥ್ಯ ಅಳೆಯಲು ಸಾಧ್ಯವಿಲ್ಲʼ ಎಂದರು.