<p><strong>ಮೈಸೂರು: </strong>‘ಮೊದಲು ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿರುವ ದರ್ಗಾ ತೆರವುಗೊಳಿಸಿ, ನಂತರ ಹಿಂದೂ ದೇವಾಲಯಗಳನ್ನು ಮುಟ್ಟಿ’ ಎಂದು ಸಂಸದ ಪ್ರತಾಪಸಿಂಹ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದರು. </p>.<p>‘ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಕಟ್ಟಲಾಗಿರುವ ಹಾಗೂ ಸಂಚಾರಕ್ಕೆ ತೊಂದರೆ ಯಾಗಿರುವ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ ದೇವಾಲಯ ಗಳಿಗೆ ಮಾತ್ರ ಸೀಮಿತಗೊಂಡಿದೆ’ ಎಂದು ಬುಧವಾರ ಇಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ತೆರವು ಕಾರ್ಯಾಚರಣೆಗೆ ಮುನ್ನ ಸಿಬ್ಬಂದಿಯು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಳ್ಳರಂತೆ ಕೆಡವುತ್ತಿದ್ದಾರೆ. ಹುಲ್ಲಹಳ್ಳಿ ಬಳಿಯ ದೇವಾಲಯವನ್ನು ಉರುಳಿಸಲಾಗಿದೆ. ಆದರೆ ಇರ್ವಿನ್ ರಸ್ತೆ ವಿಸ್ತರಣೆಗಾಗಿ ಮಸೀದಿ ಗೋಡೆಯನ್ನು ತೆರವು ಗೊಳಿಸಲು ಮಾತ್ರ ಮೀನಮೇಷ ಎಣಿಸುತ್ತಾರೆ’ ಎಂದು ಕಿಡಿಕಾರಿದರು.</p>.<p>‘ಕೆಸರೆಯಲ್ಲಿ ಕೆರೆ ಒತ್ತುವರಿ ಮಾಡಿ ಮಸೀದಿ ನಿರ್ಮಾಣಕ್ಕೆ ಸಿದ್ಧತೆ ನಡೆಸ ಲಾಗಿದೆ. ಎನ್.ಆರ್.ಮೊಹಲ್ಲಾ, ಶಕ್ತಿ ನಗರದಲ್ಲಿ ಅನ ಧಿಕೃತವಾಗಿ ಹತ್ತಾರು ಮಸೀದಿ, ದರ್ಗಾ ತಲೆ ಎತ್ತಿವೆ. ಅವು ಜಿಲ್ಲಾಡ ಳಿತಕ್ಕೆ ಕಾಣುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘2013ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಪಟ್ಟಿಯಂತೆಯೇ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರತಿಕ್ರಿಯಿಸಿದರು. </p>.<p>‘ಪಟ್ಟಿಯ ಪ್ರಕಾರ ಎಲ್ಲಾ ಧಾರ್ಮಿಕ ಕಟ್ಟಡಗಳ ತೆರವು ಆಗಲಿ. ಅದಕ್ಕೆ ಧಾರ್ಮಿಕ ಮುಖಂಡರ ಸಭೆ ಕರೆದು ಮನವರಿಕೆ ಮಾಡಿಕೊಡಿ’ ಎಂದು ಪ್ರತಾಪಸಿಂಹ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಮೊದಲು ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿರುವ ದರ್ಗಾ ತೆರವುಗೊಳಿಸಿ, ನಂತರ ಹಿಂದೂ ದೇವಾಲಯಗಳನ್ನು ಮುಟ್ಟಿ’ ಎಂದು ಸಂಸದ ಪ್ರತಾಪಸಿಂಹ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದರು. </p>.<p>‘ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಕಟ್ಟಲಾಗಿರುವ ಹಾಗೂ ಸಂಚಾರಕ್ಕೆ ತೊಂದರೆ ಯಾಗಿರುವ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ ದೇವಾಲಯ ಗಳಿಗೆ ಮಾತ್ರ ಸೀಮಿತಗೊಂಡಿದೆ’ ಎಂದು ಬುಧವಾರ ಇಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ತೆರವು ಕಾರ್ಯಾಚರಣೆಗೆ ಮುನ್ನ ಸಿಬ್ಬಂದಿಯು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಳ್ಳರಂತೆ ಕೆಡವುತ್ತಿದ್ದಾರೆ. ಹುಲ್ಲಹಳ್ಳಿ ಬಳಿಯ ದೇವಾಲಯವನ್ನು ಉರುಳಿಸಲಾಗಿದೆ. ಆದರೆ ಇರ್ವಿನ್ ರಸ್ತೆ ವಿಸ್ತರಣೆಗಾಗಿ ಮಸೀದಿ ಗೋಡೆಯನ್ನು ತೆರವು ಗೊಳಿಸಲು ಮಾತ್ರ ಮೀನಮೇಷ ಎಣಿಸುತ್ತಾರೆ’ ಎಂದು ಕಿಡಿಕಾರಿದರು.</p>.<p>‘ಕೆಸರೆಯಲ್ಲಿ ಕೆರೆ ಒತ್ತುವರಿ ಮಾಡಿ ಮಸೀದಿ ನಿರ್ಮಾಣಕ್ಕೆ ಸಿದ್ಧತೆ ನಡೆಸ ಲಾಗಿದೆ. ಎನ್.ಆರ್.ಮೊಹಲ್ಲಾ, ಶಕ್ತಿ ನಗರದಲ್ಲಿ ಅನ ಧಿಕೃತವಾಗಿ ಹತ್ತಾರು ಮಸೀದಿ, ದರ್ಗಾ ತಲೆ ಎತ್ತಿವೆ. ಅವು ಜಿಲ್ಲಾಡ ಳಿತಕ್ಕೆ ಕಾಣುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘2013ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಪಟ್ಟಿಯಂತೆಯೇ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರತಿಕ್ರಿಯಿಸಿದರು. </p>.<p>‘ಪಟ್ಟಿಯ ಪ್ರಕಾರ ಎಲ್ಲಾ ಧಾರ್ಮಿಕ ಕಟ್ಟಡಗಳ ತೆರವು ಆಗಲಿ. ಅದಕ್ಕೆ ಧಾರ್ಮಿಕ ಮುಖಂಡರ ಸಭೆ ಕರೆದು ಮನವರಿಕೆ ಮಾಡಿಕೊಡಿ’ ಎಂದು ಪ್ರತಾಪಸಿಂಹ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>