<p><strong>ನವದೆಹಲಿ: </strong>ದೇಶಕ್ಕೆ ಅಡಿಕೆ, ಕಾಳು ಮೆಣಸು ಹಾಗೂ ಟೀ ಪದಾರ್ಥಗಳನ್ನು ಆಮದು ಮಾಡುತ್ತಿರುವುದರಿಂದ ಸ್ಥಳೀಯರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವುಗಳ ಆಮದಿಗೆ ಕಡಿವಾಣ ಹಾಕಬೇಕು ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಒತ್ತಾಯಿಸಿದರು.</p>.<p>ರಾಜ್ಯಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಕರ್ನಾಟಕದಲ್ಲಿ ಅಡಿಕೆ ಕೃಷಿಯನ್ನು 20 ಲಕ್ಷ ಕುಟುಂಬಗಳು ಅವಲಂಬಿಸಿವೆ. ಆಮದಿನ ಪರಿಣಾಮದಿಂದ ಅಡಿಕೆ ಬೆಲೆ ಕ್ವಿಂಟಲ್ಗೆ ₹39 ಸಾವಿರಕ್ಕೆ ಇಳಿದಿದೆ.ನಮ್ಮ ದೇಶದಲ್ಲಿ ಅಗತ್ಯ ಅಡಿಕೆ ಲಭ್ಯ ಇದ್ದ ಸಂದರ್ಭದಲ್ಲೂ ವಿದೇಶದಿಂದ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಕಳೆದ ಮೂರು ವರ್ಷಗಳಲ್ಲಿ ಭಾರಿ ಪ್ರವಾಹದಿಂದ ಶೇ 33ರಷ್ಟು ಅಡಿಕೆ ಬೆಳೆ ನಾಶವಾಗಿದೆ’ ಎಂದರು.</p>.<p>‘ದೇಶದಲ್ಲಿ ಅತಿ ಹೆಚ್ಚು ಕಾಳುಮೆಣಸನ್ನು ಕರ್ನಾಟಕದಲ್ಲಿ ಬೆಳೆಯಲಾಗುತ್ತಿದೆ. ಆದರೆ, ವಿಯೆಟ್ನಾಂ, ಶ್ರೀಲಂಕಾದಿಂದ ಅಡಿಕೆ ಆಮದು ಮಾಡಲಾಗುತ್ತಿದೆ. ಇದರಿಂದ ಕಾಳುಮೆಣಸು ಬೆಲೆ ಕೆ.ಜಿ.ಗೆ ₹650ರಿಂದ ₹350ಕ್ಕೆ ಇಳಿದಿದೆ. ಹೀಗಾಗಿ, ಕೇಂದ್ರ ಸರ್ಕಾರವು ವ್ಯಾಪಾರಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಪುನರ್ ಪರಿಶೀಲಿಸಿ ನಮ್ಮ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶಕ್ಕೆ ಅಡಿಕೆ, ಕಾಳು ಮೆಣಸು ಹಾಗೂ ಟೀ ಪದಾರ್ಥಗಳನ್ನು ಆಮದು ಮಾಡುತ್ತಿರುವುದರಿಂದ ಸ್ಥಳೀಯರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವುಗಳ ಆಮದಿಗೆ ಕಡಿವಾಣ ಹಾಕಬೇಕು ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಒತ್ತಾಯಿಸಿದರು.</p>.<p>ರಾಜ್ಯಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಕರ್ನಾಟಕದಲ್ಲಿ ಅಡಿಕೆ ಕೃಷಿಯನ್ನು 20 ಲಕ್ಷ ಕುಟುಂಬಗಳು ಅವಲಂಬಿಸಿವೆ. ಆಮದಿನ ಪರಿಣಾಮದಿಂದ ಅಡಿಕೆ ಬೆಲೆ ಕ್ವಿಂಟಲ್ಗೆ ₹39 ಸಾವಿರಕ್ಕೆ ಇಳಿದಿದೆ.ನಮ್ಮ ದೇಶದಲ್ಲಿ ಅಗತ್ಯ ಅಡಿಕೆ ಲಭ್ಯ ಇದ್ದ ಸಂದರ್ಭದಲ್ಲೂ ವಿದೇಶದಿಂದ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಕಳೆದ ಮೂರು ವರ್ಷಗಳಲ್ಲಿ ಭಾರಿ ಪ್ರವಾಹದಿಂದ ಶೇ 33ರಷ್ಟು ಅಡಿಕೆ ಬೆಳೆ ನಾಶವಾಗಿದೆ’ ಎಂದರು.</p>.<p>‘ದೇಶದಲ್ಲಿ ಅತಿ ಹೆಚ್ಚು ಕಾಳುಮೆಣಸನ್ನು ಕರ್ನಾಟಕದಲ್ಲಿ ಬೆಳೆಯಲಾಗುತ್ತಿದೆ. ಆದರೆ, ವಿಯೆಟ್ನಾಂ, ಶ್ರೀಲಂಕಾದಿಂದ ಅಡಿಕೆ ಆಮದು ಮಾಡಲಾಗುತ್ತಿದೆ. ಇದರಿಂದ ಕಾಳುಮೆಣಸು ಬೆಲೆ ಕೆ.ಜಿ.ಗೆ ₹650ರಿಂದ ₹350ಕ್ಕೆ ಇಳಿದಿದೆ. ಹೀಗಾಗಿ, ಕೇಂದ್ರ ಸರ್ಕಾರವು ವ್ಯಾಪಾರಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಪುನರ್ ಪರಿಶೀಲಿಸಿ ನಮ್ಮ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>