ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿ 120 ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಕೊಡಗು ಶಾಂತಿ, ಸಹಬಾಳ್ವೆಗೆ ಹೆಸರಾದ ಜಿಲ್ಲೆ. ಆತಂಕಕಾರಿ ತರಬೇತಿ ಶಿಬಿರದಿಂದ ಭವಿಷ್ಯದಲ್ಲಿ ಜಿಲ್ಲೆಯನ್ನು ಕೇಸರಿ ಭಯೋತ್ಪಾದನೆ ತಾಣವಾಗಿಸಲು ಹೊರಟಂತೆ ಕಾಣಿಸುತ್ತಿದ್ದು, ಆಯೋಜಕರು ಹಾಗೂ ಉತ್ತೇಜನ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ, ಪಿಎಫ್ಐ ಸದಸ್ಯ ಕೆ.ಎಚ್.ಇಬ್ರಾಹಿಂ ಪೊನ್ನಂಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.