ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

Last Updated 15 ಸೆಪ್ಟೆಂಬರ್ 2021, 9:44 IST
ಅಕ್ಷರ ಗಾತ್ರ

ಬಾಗಲಕೋಟೆ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾದಾಮಿ ತಾಲ್ಲೂಕಿನ ಸೂಳಿಕೇರಿ ಗ್ರಾಮದ ಯೋಧಹನುಮಂತ ಎಸ್. ಹಡಪದ (32) ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಎಂಟು ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಹನುಮಂತ ಹಡಪದ ಕಳೆದ 12 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಯೋಧನಾಗಿ ಕೆಲಸ ಮಾಡುತ್ತಿದ್ದರು.ಇತ್ತೀಚೆಗೆ ಪಂಜಾಬ್‌ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅವರು, ರಜೆಗಾಗಿ ಊರಿಗೆ ಬಂದಿದ್ದರು.

ಸೂಳಿಕೇರಿ ಗ್ರಾಮದಲ್ಲಿ ಬುಧವಾರ ಹನುಮಂತ ಹಡಪದ ಅವರ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT