‘ಶಂಕಿತರೊಂದಿಗೆ ಯಾರೆಲ್ಲಾ ಸಂಪರ್ಕದಲ್ಲಿದ್ದರು ಹಾಗೂ ಅವರ ಉದ್ದೇಶ ಪತ್ತೆಗೆ ಎನ್ಐಎ ತನಿಖೆ ಮುಂದುವರಿಯಲಿದೆ’ ಎಂದು ಮೂಲಗಳು ತಿಳಿಸಿವೆ.
‘ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಅಖ್ತರ್ ಹುಸೇನ್ ಲಷ್ಕರ್, ತಿಲಕನಗರದ ಬಿಟಿಬಿ ಲೇಔಟ್ನ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿದ್ದ ಈತ, ಉಗ್ರ ಚಟುವಟಿಕೆ ಸಂಬಂಧಿಸಿದ ಪೋಸ್ಟ್ಗಳನ್ನು ಹಾಕುತ್ತಿದ್ದ. ಯುವಕರನ್ನು ಅಫ್ಗಾನಿಸ್ತಾನಕ್ಕೆ ಕಳುಹಿಸಿ ಭಯೋತ್ಪಾದನೆ ತರಬೇತಿ ನೀಡಲು ಸಂಚು ರೂಪಿಸಿದ್ದ’ ಎಂಬುದು ಸಿಸಿಬಿ ತನಿಖೆ ವೇಳೆ ಪತ್ತೆಯಾಗಿತ್ತು.
‘ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅಖ್ತರ್ ಹುಸೇನ್ ಲಷ್ಕರ್ ಸಹ ತಮಿಳುನಾಡಿನ ಜುಬಾನಾ ಮೂಲಕ ಕಾಶ್ಮೀರದ ಮೂಲಕ ಅಫ್ಗಾನಿಸ್ತಾನಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದ’ ಎಂದು ಮೂಲಗಳು ತಿಳಿಸಿವೆ.
‘ಜಮ್ಮು- ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ್ದರಿಂದ ಆಕ್ರೋಶಗೊಂಡು ಸಾಮಾಜಿಕ ಜಾಲತಾಣಗಳಲ್ಲಿ ದೇಶ ವಿರೋಧಿ ಪೋಸ್ಟ್ ಹಾಕುತ್ತಿದ್ದ. ಅದನ್ನು ಗಮನಿಸಿದ್ದ ಉಗ್ರ ಸಂಘಟನೆಯವರು ಅಖ್ತರ್ನನ್ನು ಸಂಪರ್ಕಿಸಿದ್ದರು’ ಎಂದು ತನಿಖೆಯ ವೇಳೆ ಗೊತ್ತಾಗಿತ್ತು.