<p><strong>ಬೆಂಗಳೂರು:</strong> ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.</p>.<p>ಅಪಘಾತದಲ್ಲಿ ಗಂಭೀರ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಶನಿವಾರ ಮಧ್ಯರಾತ್ರಿ ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶಿವಮೊಗ್ಗ-ಬೆಂಗಳೂರು ಮಾರ್ಗದ ರಸ್ತೆಯಲ್ಲಿ ಬಸ್, ಹಾಲಿನ ಟ್ಯಾಂಕರ್ ಮತ್ತು ಟೆಂಪೊ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿದೆ.</p>.<p>ಟೆಂಪೊ ಟ್ರಾವೆಲರ್ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್ನಲ್ಲಿದ್ದ ಐವರಿಗೆ ಗಾಯಗಳಾಗಿವೆ.</p>.<p>ಹಾಲಿನ ಟ್ಯಾಂಕರ್ ಚಾಲಕ ಡೈವರ್ಷನ್ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.</p>.<p>ಮೃತರು ಧರ್ಮಸ್ಥಳದಿಂದ ಹಿಂದಿರುಗಿ ಹಾಸನದ ಹಾಸನಾಂಬೆ ದರ್ಶನ ಮಾಡಿಕೊಂಡು ವಾಪಸ್ ತಮ್ಮ ಊರಿಗೆ ತೆರಳುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.</p>.<p>ಅಪಘಾತದಲ್ಲಿ ಗಂಭೀರ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಶನಿವಾರ ಮಧ್ಯರಾತ್ರಿ ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶಿವಮೊಗ್ಗ-ಬೆಂಗಳೂರು ಮಾರ್ಗದ ರಸ್ತೆಯಲ್ಲಿ ಬಸ್, ಹಾಲಿನ ಟ್ಯಾಂಕರ್ ಮತ್ತು ಟೆಂಪೊ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿದೆ.</p>.<p>ಟೆಂಪೊ ಟ್ರಾವೆಲರ್ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್ನಲ್ಲಿದ್ದ ಐವರಿಗೆ ಗಾಯಗಳಾಗಿವೆ.</p>.<p>ಹಾಲಿನ ಟ್ಯಾಂಕರ್ ಚಾಲಕ ಡೈವರ್ಷನ್ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.</p>.<p>ಮೃತರು ಧರ್ಮಸ್ಥಳದಿಂದ ಹಿಂದಿರುಗಿ ಹಾಸನದ ಹಾಸನಾಂಬೆ ದರ್ಶನ ಮಾಡಿಕೊಂಡು ವಾಪಸ್ ತಮ್ಮ ಊರಿಗೆ ತೆರಳುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>