‘ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧಪಡಿಸಿರುವ ಪಠ್ಯಕ್ರಮದಂತೆ ಚಿತ್ರಕಲೆ ಮತ್ತು ಸಂಗೀತ ವಿಷಯಗಳಿಗೆ ಒತ್ತು ನೀಡಲಾಗಿದೆ. ಆದರೆ ಈ ಎರಡೂ ವಿಷಯಗಳಿಗೆ ಆದ್ಯತೆ ಮೇಲೆ ಶಿಕ್ಷಕರ ನೇಮಕಾತಿ ಆಗುತ್ತಿಲ್ಲ. ನೆರೆಯ ಗೋವಾ, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಪ್ರತಿವರ್ಷ ನೇಮಕಾತಿ ನಡೆಯುತ್ತಿದೆ. ನಮ್ಮಲ್ಲಿ ಚಿತ್ರಕಲೆ ಡಿಪ್ಲೊಮಾ ಮತ್ತು ಪದವೀಧರ ಶಿಕ್ಷಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಚಿತ್ರಕಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಭೀಮರಾಯ ಅವಟಿ ‘ಪ್ರಜಾವಾಣಿ’ಗೆ ತಿಳಿಸಿದರು.